July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳದ ಸಂಘಟನೆಯನ್ನು ನಿಷೇಧಿಸುವ ಕುರಿತು ಆಶ್ವಾಸನೆ ನೀಡಿದ್ದು ಬೆಳ್ತಂಗಡಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಖಂಡಿಸಿದ್ದಾರೆ.

ಲವ್ ಜಿಹಾದ್, ಗೋ ಹತ್ಯೆಯಂತಹ ಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ಸದಾ ಗುಡುಗುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದು ಮೂರ್ಖತನದ ನಿರ್ಧಾರ, ಭಯೋತ್ಪಾದನೆಯ ವಿರುದ್ಧ ರಾಷ್ಟ್ರ ಜಾಗೃತಿಯ ಕೆಲಸ ಮಾಡುತ್ತಿರುವ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ತುಂಬಿದ ಭಜರಂಗದಳವನ್ನು ಹಳ್ಳಿಹಳ್ಳಿಯಲ್ಲಿರುವ ದೇವಸ್ಮಾನ, ದೈವಸ್ಥಾನಗಳ ಜೀರ್ಣೋದ್ದಾರದ ಮೂಲಕ ಸಂರಕ್ಷಣೆ ಮಾಡುತ್ತಿರುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಆಶ್ವಾಸನೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆ.

ಕಾಂಗ್ರೆಸ್ ಪಕ್ಷದ ಈ ನಿರ್ಧಾರ ಹಿಂದೂ ದಮನಕಾರಿ ನೀತಿಯನ್ನು ಪ್ರದರ್ಶಿಸುತ್ತಿದೆ. ಕಾಂಗ್ರೆಸ್ಸಿನ ಈ ಹಿಂದೂ ವಿರೋಧಿ ನೀತಿಗೆ ಮತದಾನದ ದಿನ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ, ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ನೀತಿಯಿಂದಲೇ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!