25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

ಪುಂಜಾಲಕಟ್ಟೆ: ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥವಾಗಿ ಸುಮಾರು 86 ವರ್ಷಗಳ ಸುಧೀರ್ಘ ಅನುಭವದೊಂದಿಗೆ ಚಿನ್ನಾಭರಣ ಪ್ರೀಯರ ನೆಚ್ಚಿನ ಮಳಿಗೆಯಾದ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ನೂತನ ಮಳಿಗೆ ಮೇ.3 ರಂದು ಶುಭಾರಂಭಗೊಂಡಿತು.

ಕಳೆದ 8 ದಶಕಗಳ ಹಿಂದೆ ಬಿ. ಪುಂಡಲೀಕ ಬಾಳಿಗ ರವರು ಚಿನ್ನಾಭರಣ ಮಳಿಗೆಯನ್ನು ಸ್ಥಾಪಿಸಿ ಜಿಲ್ಲೆಯ ಪ್ರಸಿದ್ದ ಸಂಸ್ಥೆಗಳಲ್ಲಿ ಪುಂಜಾಲಕಟ್ಟೆಯ ಪುಂಡಲೀಕ ಬಾಳಿಗ ಕೂಡ ಒಂದಾಗಿದೆ.


ಸ್ವರ್ಣೋದ್ಯಮದೊಂದಿಗೆ ಸಮಾಜಸೇವೆಯನ್ನು ಉಸಿರಾಗಿಸಿಕೊಂಡು ಜಿಲ್ಲೆಯಾದ್ಯಂತ ನಡೆಯುವ ಹಲವಾರು ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆಯು ನೂರಾರು ಮಂದಿಗೆ ಉದ್ಯೋಗ ನೀಡಿದೆ. ವಿಶೇಷವಾಗಿ ಸಂಸ್ಥೆಯು ಗುಣಮಟ್ಟದ ಸೇವೆಗೆ ಹೆಸರುವಾಸಿಯಾಗಿ, ಉದ್ಯಮದಲ್ಲಿ ಬಲವಾದ ಪರಂಪರೆಯನ್ನು ಸೃಷ್ಟಿಸಿದೆ.


ವಿಶಾಲವಾದ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ವಿನ್ಯಾಸ ಹೊಸತನವನ್ನು ಅನುಭವಿಸಿ, ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.

ಮಳಿಗೆಯನ್ನು ಬಿ. ಪುರುಷೋತ್ತಮ ಬಾಳಿಗಾ- ಚಂದ್ರಕಲಾ ಬಾಳಿಗಾ, ಬಿ. ರವೀಂದ್ರ ಬಾಳಿಗಾ- ರೇಖಾ ಬಾಳಿಗಾ,ದಿನೇಶ್ ಪೈ-ಪ್ರಭಾ ಡಿ ಪೈ, ಬಿ. ಪ್ರಶಾಂತ ಬಾಳಿಗಾ-ದಿವ್ಯಾ ಬಾಳಿಗಾ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು

ಶುಭಾರಂಭದ ಪ್ರಯುಕ್ತ ಮಳಿಗೆಗೆ ಗ್ರಾಹಕರು ಆಗಮಿಸಿ ಶುಭಹಾರೈಸುತ್ತಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!