30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

ಪುಂಜಾಲಕಟ್ಟೆ: ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥವಾಗಿ ಸುಮಾರು 86 ವರ್ಷಗಳ ಸುಧೀರ್ಘ ಅನುಭವದೊಂದಿಗೆ ಚಿನ್ನಾಭರಣ ಪ್ರೀಯರ ನೆಚ್ಚಿನ ಮಳಿಗೆಯಾದ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ನೂತನ ಮಳಿಗೆ ಮೇ.3 ರಂದು ಶುಭಾರಂಭಗೊಂಡಿತು.

ಕಳೆದ 8 ದಶಕಗಳ ಹಿಂದೆ ಬಿ. ಪುಂಡಲೀಕ ಬಾಳಿಗ ರವರು ಚಿನ್ನಾಭರಣ ಮಳಿಗೆಯನ್ನು ಸ್ಥಾಪಿಸಿ ಜಿಲ್ಲೆಯ ಪ್ರಸಿದ್ದ ಸಂಸ್ಥೆಗಳಲ್ಲಿ ಪುಂಜಾಲಕಟ್ಟೆಯ ಪುಂಡಲೀಕ ಬಾಳಿಗ ಕೂಡ ಒಂದಾಗಿದೆ.


ಸ್ವರ್ಣೋದ್ಯಮದೊಂದಿಗೆ ಸಮಾಜಸೇವೆಯನ್ನು ಉಸಿರಾಗಿಸಿಕೊಂಡು ಜಿಲ್ಲೆಯಾದ್ಯಂತ ನಡೆಯುವ ಹಲವಾರು ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆಯು ನೂರಾರು ಮಂದಿಗೆ ಉದ್ಯೋಗ ನೀಡಿದೆ. ವಿಶೇಷವಾಗಿ ಸಂಸ್ಥೆಯು ಗುಣಮಟ್ಟದ ಸೇವೆಗೆ ಹೆಸರುವಾಸಿಯಾಗಿ, ಉದ್ಯಮದಲ್ಲಿ ಬಲವಾದ ಪರಂಪರೆಯನ್ನು ಸೃಷ್ಟಿಸಿದೆ.


ವಿಶಾಲವಾದ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ವಿನ್ಯಾಸ ಹೊಸತನವನ್ನು ಅನುಭವಿಸಿ, ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.

ಮಳಿಗೆಯನ್ನು ಬಿ. ಪುರುಷೋತ್ತಮ ಬಾಳಿಗಾ- ಚಂದ್ರಕಲಾ ಬಾಳಿಗಾ, ಬಿ. ರವೀಂದ್ರ ಬಾಳಿಗಾ- ರೇಖಾ ಬಾಳಿಗಾ,ದಿನೇಶ್ ಪೈ-ಪ್ರಭಾ ಡಿ ಪೈ, ಬಿ. ಪ್ರಶಾಂತ ಬಾಳಿಗಾ-ದಿವ್ಯಾ ಬಾಳಿಗಾ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು

ಶುಭಾರಂಭದ ಪ್ರಯುಕ್ತ ಮಳಿಗೆಗೆ ಗ್ರಾಹಕರು ಆಗಮಿಸಿ ಶುಭಹಾರೈಸುತ್ತಿದ್ದಾರೆ.

Related posts

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya
error: Content is protected !!