September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

ಪುಂಜಾಲಕಟ್ಟೆ: ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥವಾಗಿ ಸುಮಾರು 86 ವರ್ಷಗಳ ಸುಧೀರ್ಘ ಅನುಭವದೊಂದಿಗೆ ಚಿನ್ನಾಭರಣ ಪ್ರೀಯರ ನೆಚ್ಚಿನ ಮಳಿಗೆಯಾದ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ನೂತನ ಮಳಿಗೆ ಮೇ.3 ರಂದು ಶುಭಾರಂಭಗೊಂಡಿತು.

ಕಳೆದ 8 ದಶಕಗಳ ಹಿಂದೆ ಬಿ. ಪುಂಡಲೀಕ ಬಾಳಿಗ ರವರು ಚಿನ್ನಾಭರಣ ಮಳಿಗೆಯನ್ನು ಸ್ಥಾಪಿಸಿ ಜಿಲ್ಲೆಯ ಪ್ರಸಿದ್ದ ಸಂಸ್ಥೆಗಳಲ್ಲಿ ಪುಂಜಾಲಕಟ್ಟೆಯ ಪುಂಡಲೀಕ ಬಾಳಿಗ ಕೂಡ ಒಂದಾಗಿದೆ.


ಸ್ವರ್ಣೋದ್ಯಮದೊಂದಿಗೆ ಸಮಾಜಸೇವೆಯನ್ನು ಉಸಿರಾಗಿಸಿಕೊಂಡು ಜಿಲ್ಲೆಯಾದ್ಯಂತ ನಡೆಯುವ ಹಲವಾರು ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆಯು ನೂರಾರು ಮಂದಿಗೆ ಉದ್ಯೋಗ ನೀಡಿದೆ. ವಿಶೇಷವಾಗಿ ಸಂಸ್ಥೆಯು ಗುಣಮಟ್ಟದ ಸೇವೆಗೆ ಹೆಸರುವಾಸಿಯಾಗಿ, ಉದ್ಯಮದಲ್ಲಿ ಬಲವಾದ ಪರಂಪರೆಯನ್ನು ಸೃಷ್ಟಿಸಿದೆ.


ವಿಶಾಲವಾದ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ವಿನ್ಯಾಸ ಹೊಸತನವನ್ನು ಅನುಭವಿಸಿ, ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.

ಮಳಿಗೆಯನ್ನು ಬಿ. ಪುರುಷೋತ್ತಮ ಬಾಳಿಗಾ- ಚಂದ್ರಕಲಾ ಬಾಳಿಗಾ, ಬಿ. ರವೀಂದ್ರ ಬಾಳಿಗಾ- ರೇಖಾ ಬಾಳಿಗಾ,ದಿನೇಶ್ ಪೈ-ಪ್ರಭಾ ಡಿ ಪೈ, ಬಿ. ಪ್ರಶಾಂತ ಬಾಳಿಗಾ-ದಿವ್ಯಾ ಬಾಳಿಗಾ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು

ಶುಭಾರಂಭದ ಪ್ರಯುಕ್ತ ಮಳಿಗೆಗೆ ಗ್ರಾಹಕರು ಆಗಮಿಸಿ ಶುಭಹಾರೈಸುತ್ತಿದ್ದಾರೆ.

Related posts

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya
error: Content is protected !!