ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆಯ ಮೆರವಣಿಗೆ ಸಂಧರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದoತೆ ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪುರಂದರ, ಯೋಗೀಶ್ ನಡ, ಗಣೇಶ್ ಕಣಿಯೂರು ಮತ್ತು ಹರೀಶ್ ಗೇರುಕಟ್ಟೆ ಯವರುಗಳ ವಿರುದ್ಧ ಬೆಳ್ತಂಗಡಿ ತಾಲೂಕು ದಂಡಾಧಿಕಾರಿಗಳು ನೀಡಿದ್ದ ಸಮನ್ಸ್ ಗೆ
ಜಿಲ್ಲಾ ನ್ಯಾಯಾದೀಶರು ಮುಂದಿನ ಆದೇಶದವರೆಗೆ ತಡೆ ನೀಡಿದ್ದಾರೆ.

ಬೆಳ್ತಂಗಡಿ ಪೋಲೀಸರ ಸಲ್ಲಿಸಿದ ವರದಿಯಂತೆ ಬೆಳ್ತಂಗಡಿ ತಹಶೀಲ್ದಾರರು ಸಿ ಆರ್ ಪಿ ಸಿ ಕಲಂ 113 ರಂತೆ
ಶಾಂತಿಪಾಲನೆಗಾಗಿ ಮುಚ್ಚಳಿಕೆ ಬರೆದು ಕೊಡುವಂತೆ ಸಮನ್ಸ್ ನೀಡಿದ್ದರು. ಇದನ್ನು ಪ್ರಶ್ನಿಸಿ ಅಭಿನಂದನ್ ಮತ್ತಿತರರು ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

Leave a Comment

error: Content is protected !!