23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಚಿಣ್ಣರ ಬೇಸಿಗೆ ಶಿಬಿರ ರಂಗ ಜೇಂಕಾರವು ಮೇ 2 ರಂದು ಸಂಪನ್ನಗೊಂಡಿತು.
ಸಮಾರೋಪ ವೇದಿಕೆಯ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿ ಬೆಳೆಯುವ ಮಕ್ಕಳ ಭೌತಿಕ ಮತ್ತು ಮಾನಸಿಕ ವಿಕಾಸಕ್ಕೆ ಬೇಸಿಗೆ ಶಿಬಿರಗಳು ಅತ್ಯಂತ ಪೂರಕವಾಗಿದೆ. ಬೇಸಿಗೆ ಶಿಬಿರದಲ್ಲಿ ಕೊಲಾಜ್, ಕ್ರಾಫ್ಟ್, ಕ್ಲೇ ಮಾಡೆಲ್, ಗ್ರಿಟಿಂಗ್ ಕಾರ್ಡ್ ತಯಾರಿಕೆ ಹೊರಂಗಣ ಕ್ರೀಡೆ ಮುಂತಾದ ಚಟುವಟಿಕೆಗಳು ಮಕ್ಕಳಲ್ಲಿ ಸೃಜನಶೀಲತೆ ಉಂಟುಮಾಡುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಜೆಸಿಐ ಭಾರತದ ವಲಯ XVರ ವಲಯಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜೆಸಿಐ ಬೆಳ್ತಂಗಡಿ ಆಯೋಜಿಸಿದ ಬೇಸಿಗೆ ಶಿಬಿರದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಮಕ್ಕಳ ಕೌಶಲ್ಯ ಭರಿತ ಚಟುವಟಿಕೆಗಳನ್ನು ಕಂಡು ಶ್ಲಾಘಿಸಿದರು. ಕಾರ್ಯಕ್ರಮ ಸಂಯೋಜಕರಾದ ಹೇಮಾವತಿ ಕೆ. ಶಿಬಿರಾರ್ಥಿಗಳ ಬಹುಮಾನ ಪಟ್ಟಿಯನ್ನು ವಾಚಿಸಿದರು.


ಬೇಸಿಗೆ ಶಿಬಿರದುದ್ದಕ್ಕೂ ದುಡಿದ ಜೆಸಿ ವಿನಾಯಕ ಪ್ರಸಾದ್ ಜೆ ಜೆ ಸಿ ಧನುಷ್ ಇವರನ್ನು ಗೌರವಿಸಲಾಯಿತು. ಜೆಸಿಐ ಬೆಳ್ತಂಗಡಿಯ ಪೂರ್ವಧ್ಯಕ್ಷರು ಸದಸ್ಯರು ಮತ್ತು ಶಿಬಿರಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಗೌರವಾನ್ವಿತ ಅಬ್ಯಾಗತರನ್ನು ಮತ್ತು ಪದಾಧಿಕಾರಿಗಳನ್ನು ಪೂರ್ವಧ್ಯಕ್ಷರಾದ ಚಿದಾನಂದ ಇಡ್ಯಾ ವೇದಿಕೆಗೆ ಬರಮಾಡಿಕೊಂಡರು.
ಕಾರ್ಯದರ್ಶಿ ಸುಧೀರ್ ಕೆ. ಎನ್ ಧನ್ಯವಾದವಿತ್ತರು.

Related posts

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!