24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಚಿಣ್ಣರ ಬೇಸಿಗೆ ಶಿಬಿರ ರಂಗ ಜೇಂಕಾರವು ಮೇ 2 ರಂದು ಸಂಪನ್ನಗೊಂಡಿತು.
ಸಮಾರೋಪ ವೇದಿಕೆಯ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿ ಬೆಳೆಯುವ ಮಕ್ಕಳ ಭೌತಿಕ ಮತ್ತು ಮಾನಸಿಕ ವಿಕಾಸಕ್ಕೆ ಬೇಸಿಗೆ ಶಿಬಿರಗಳು ಅತ್ಯಂತ ಪೂರಕವಾಗಿದೆ. ಬೇಸಿಗೆ ಶಿಬಿರದಲ್ಲಿ ಕೊಲಾಜ್, ಕ್ರಾಫ್ಟ್, ಕ್ಲೇ ಮಾಡೆಲ್, ಗ್ರಿಟಿಂಗ್ ಕಾರ್ಡ್ ತಯಾರಿಕೆ ಹೊರಂಗಣ ಕ್ರೀಡೆ ಮುಂತಾದ ಚಟುವಟಿಕೆಗಳು ಮಕ್ಕಳಲ್ಲಿ ಸೃಜನಶೀಲತೆ ಉಂಟುಮಾಡುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಜೆಸಿಐ ಭಾರತದ ವಲಯ XVರ ವಲಯಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜೆಸಿಐ ಬೆಳ್ತಂಗಡಿ ಆಯೋಜಿಸಿದ ಬೇಸಿಗೆ ಶಿಬಿರದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಮಕ್ಕಳ ಕೌಶಲ್ಯ ಭರಿತ ಚಟುವಟಿಕೆಗಳನ್ನು ಕಂಡು ಶ್ಲಾಘಿಸಿದರು. ಕಾರ್ಯಕ್ರಮ ಸಂಯೋಜಕರಾದ ಹೇಮಾವತಿ ಕೆ. ಶಿಬಿರಾರ್ಥಿಗಳ ಬಹುಮಾನ ಪಟ್ಟಿಯನ್ನು ವಾಚಿಸಿದರು.


ಬೇಸಿಗೆ ಶಿಬಿರದುದ್ದಕ್ಕೂ ದುಡಿದ ಜೆಸಿ ವಿನಾಯಕ ಪ್ರಸಾದ್ ಜೆ ಜೆ ಸಿ ಧನುಷ್ ಇವರನ್ನು ಗೌರವಿಸಲಾಯಿತು. ಜೆಸಿಐ ಬೆಳ್ತಂಗಡಿಯ ಪೂರ್ವಧ್ಯಕ್ಷರು ಸದಸ್ಯರು ಮತ್ತು ಶಿಬಿರಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಗೌರವಾನ್ವಿತ ಅಬ್ಯಾಗತರನ್ನು ಮತ್ತು ಪದಾಧಿಕಾರಿಗಳನ್ನು ಪೂರ್ವಧ್ಯಕ್ಷರಾದ ಚಿದಾನಂದ ಇಡ್ಯಾ ವೇದಿಕೆಗೆ ಬರಮಾಡಿಕೊಂಡರು.
ಕಾರ್ಯದರ್ಶಿ ಸುಧೀರ್ ಕೆ. ಎನ್ ಧನ್ಯವಾದವಿತ್ತರು.

Related posts

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
error: Content is protected !!