22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

ಪುಂಜಾಲಕಟ್ಟೆ: ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥವಾಗಿ ಸುಮಾರು 86 ವರ್ಷಗಳ ಸುಧೀರ್ಘ ಅನುಭವದೊಂದಿಗೆ ಚಿನ್ನಾಭರಣ ಪ್ರೀಯರ ನೆಚ್ಚಿನ ಮಳಿಗೆಯಾದ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ವಿಸ್ತೃತ ನೂತನ ಮಳಿಗೆ ಮೇ.3 ರಂದು ಶುಭಾರಂಭಗೊಂಡಿತು.

ಕಳೆದ 8 ದಶಕಗಳ ಹಿಂದೆ ಬಿ. ಪುಂಡಲೀಕ ಬಾಳಿಗ ರವರು ಚಿನ್ನಾಭರಣ ಮಳಿಗೆಯನ್ನು ಸ್ಥಾಪಿಸಿ ಜಿಲ್ಲೆಯ ಪ್ರಸಿದ್ದ ಸಂಸ್ಥೆಗಳಲ್ಲಿ ಪುಂಜಾಲಕಟ್ಟೆಯ ಪುಂಡಲೀಕ ಬಾಳಿಗ ಕೂಡ ಒಂದಾಗಿದೆ.


ಸ್ವರ್ಣೋದ್ಯಮದೊಂದಿಗೆ ಸಮಾಜಸೇವೆಯನ್ನು ಉಸಿರಾಗಿಸಿಕೊಂಡು ಜಿಲ್ಲೆಯಾದ್ಯಂತ ನಡೆಯುವ ಹಲವಾರು ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆಯು ನೂರಾರು ಮಂದಿಗೆ ಉದ್ಯೋಗ ನೀಡಿದೆ. ವಿಶೇಷವಾಗಿ ಸಂಸ್ಥೆಯು ಗುಣಮಟ್ಟದ ಸೇವೆಗೆ ಹೆಸರುವಾಸಿಯಾಗಿ, ಉದ್ಯಮದಲ್ಲಿ ಬಲವಾದ ಪರಂಪರೆಯನ್ನು ಸೃಷ್ಟಿಸಿದೆ.


ವಿಶಾಲವಾದ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ವಿನ್ಯಾಸ ಹೊಸತನವನ್ನು ಅನುಭವಿಸಿ, ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.

ಮಳಿಗೆಯನ್ನು ಬಿ. ಪುರುಷೋತ್ತಮ ಬಾಳಿಗಾ- ಚಂದ್ರಕಲಾ ಬಾಳಿಗಾ, ಬಿ. ರವೀಂದ್ರ ಬಾಳಿಗಾ- ರೇಖಾ ಬಾಳಿಗಾ,ದಿನೇಶ್ ಪೈ-ಪ್ರಭಾ ಡಿ ಪೈ, ಬಿ. ಪ್ರಶಾಂತ ಬಾಳಿಗಾ-ದಿವ್ಯಾ ಬಾಳಿಗಾ ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು

ಶುಭಾರಂಭದ ಪ್ರಯುಕ್ತ ಮಳಿಗೆಗೆ ಗ್ರಾಹಕರು ಆಗಮಿಸಿ ಶುಭಹಾರೈಸುತ್ತಿದ್ದಾರೆ.

Related posts

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ: ಎಸ್.ಡಿ.ಎಂ. ಪಿಯು ಕಾಲೇಜಿನ 24 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya
error: Content is protected !!