March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಐಕ್ಯೂಎಸಿ, ಯೂಥ್ ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇದರ ಅಡಿಯಲ್ಲಿ ಜೀವನ ಕೌಶಲ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ಮೇ 3 ರಂದು ಹಮ್ಮಿಕೊಳ್ಳಲಾಗಿತ್ತು.

ಜೀವನ ಕೌಶಲಕ್ಕೆ ಸಂಬಂಧಪಟ್ಟಂತೆ ವಿವಿಧ ಚಟುವಟಿಕೆಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ, ಸ್ವ ಅರಿವು, ಸಹಾನುಭೂತಿ ಸೃಜನಾತ್ಮಕ ಆಲೋಚನೆ, ಸಂವಹನ ಕೌಶಲಗಳ ಅರಿವು ಮೂಡಿಸಲಾಯಿತು.

ಸುಮಾರು 150 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುಬ್ರಮಣ್ಯ ಭಟ್ ಕೆ ಇವರು ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಸಂತೋಷ್ ಪ್ರಭು ಎಂ, ಸಹಾಯಕ ಪ್ರಾಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಕಾರ್ಯಾಗಾರವನ್ನು ಉದ್ಘಾಟಿಸಿ ನಡೆಸಿಕೊಟ್ಟರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಪ್ರೊ. ಸುರೇಶ್ ವಿ ಸ್ವಾಗತಿಸಿದರು. ರೋವರ್ಸ್ ರೆಂಜರ್ಸ್ ಸಂಯೋಜನಾಧಿಕಾರಿ ಡಾ. ರವಿ ಎಂ. ಏನ್ ಕಾರ್ಯಕ್ರಮದ ಉಸ್ತುವಾರಿ ಹೊತ್ತಿದ್ದರು. ವಾಣಿಜ್ಯಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕರು ಪ್ರೊ. ರಾಜೇಶ್ವರಿ ಎಚ್ಎಸ್ ವಂದಿಸಿದರು. ರೋವರ್ಸ್ ರೆಂಜರ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya
error: Content is protected !!