25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

ಕೊಯ್ಯೂರು ಗ್ರಾಮದ ಆದೂರ್ ಪೇರಾಲ್ ನಲ್ಲಿ ನಡೆದ ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹಲವಾರು ಮಂದಿ ಬಿ ಜೆ ಪಿ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಕೊಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ನಾರಾಯಣ ನೀರಾಕಜೆ, ಬಿ ಜೆ ಪಿ ಯ ಸಕ್ರಿಯ ಕಾರ್ಯಕರ್ತರಾದ ಮೋನಪ್ಪ ಸಾಲಿಯಾನ್ ಬಜಿಲ, ರವೀಂದ್ರ ಪೂಜಾರಿ ಬಜಿಲ, ಲೋಹಿತ್ ಉಮಿಯ, ಸುರೇಶ ಉಮಿಯ, ಯೋಗೀಶ್ ಪದ್ಮುಂಜ, ದೇಜಪ್ಪ ನಿರಾರಿ, ರವೀಂದ್ರ ಆಚಾರ್ಯ ಕೊಯ್ಯುರು ಮುಂತಾದವರು ಕಾಂಗ್ರೇಸ್ ಪಕ್ಷವನ್ನು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಅಭ್ಯರ್ಥಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಶೈಲೇಶ್ ಕುಮಾರ್, ಮಾಜಿ ಅಧ್ಯಕ್ಷರಾದ ರಾಜಶೇಖರ ಅಜ್ರಿ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೇಸ್ ಅಧ್ಯಕ್ಷ ಸಾಹುಲ್ ಹಮೀದ್, ಪ್ರವೀಣ್ ವಿ ಜಿ ಮುಂತಾದವರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya
error: Content is protected !!