July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

ಅರಸಿನಮಕ್ಕಿ : ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಸಮೀಪದ ಪಾಲೆಂಜ ನಿವಾಸಿ ಕೃಷಿಕ ಮುರಳೀಧರ ಗೌಡ ಪಾಲೆಂಜ ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4ರಂದು ನಡೆದಿದೆ.

ಕಂಟ್ರಾಕ್ಟ್ರುದಾರರಾಗಿದ್ದ ಇವರು ಜನಾನುರಾಗಿಯಾಗಿದ್ದರು. ಹಲವಾರು ಸಂಘ -ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಯೋಜನಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿಯಾಗಿ ದೇವಳದ ಅಭಿವೃದ್ಧಿಗೇ ವಿಶೇಷವಾಗಿ ಶ್ರಮಿಸಿದ್ದರು.ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ, ಮಗು, ತಾಯಿ ಹಾಗೂ ಇಬ್ಬರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ.

Related posts

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya
error: Content is protected !!