ಗೇರುಕಟ್ಟೆ : ಓಡಿಲ್ನಾಳ, ಕಳಿಯ, ನ್ಯಾಯತರ್ಪು, ಕುವೆಟ್ಟು, ಕೊಯ್ಯೂರು ಗ್ರಾಮದ ಭಾರತೀಯ ಜನತಾ ಪಾರ್ಟಿಯ ಬೃಹತ್ ಪ್ರಚಾರ ಸಭೆಯು ಮೆ.5ರಂದು ಗೇರುಕಟ್ಟೆ ಬಸ್ ನಿಲ್ದಾಣ ಬಳಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ, ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, . ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಶಿನಿ ಜನಾರ್ಧನ ಗೌಡ , ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ , ಹಿತೇಶ್, ಅಭ್ಯರ್ಥಿ ಪ್ರಮುಖ್ ಜಯಾನಂದ್ ಗೌಡ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾಲತಾ, ಮಂಡಲ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ಹಿರಿಯರಾದ ಸುಬ್ರಹ್ಮಣ್ಯ ಅಗರ್ತ, ಹಿರಿಯರಾದ ವಸಂತ ಮಜಲು ಮತ್ತು ಮಂಡಲ ಪದಾಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು ತಾ.ಪ.ಮಾಜಿ ಸದಸ್ಯ ಕೊರಗಪ್ಪ ಗೌಡ, ಹಿರಿಯರಾದ ಪೂವಪ್ಪ ಭಂಡಾರಿ, ರಾಜೇಶ್ ಪೆರ್ಮಡ , ಆರ್.ಎನ್ ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ದಾವೋದರ ಗೌಡ ಸ್ವಾಗತಿಸಿದರು.












