25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

ಬೆಳ್ತಂಗಡಿ : ಇಲ್ಲಿಯ ಹಳೆಕೋಟೆಯ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಹಾಗೂ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ರವರ ಸಮ್ಮುಖದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರದ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಜನಿ ಕುಡ್ವ, ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಮಹಾಬಲ ಗೌಡ, ಮುಗುಳಿ ನಾರಾಯಣ ರಾವ್, ರಾಜೇಶ್ ಪ್ರಭು ಪಟ್ಟಣ ಪಂಚಾಯತ್ ಸದಸ್ಯರಾದ, ಶರತ್ ಕುಮಾರ್, ಲೋಕೇಶ್, ನಾಮ ನಿರ್ದೇಶನ ಸದಸ್ಯರಾದ ಪ್ರಕಾಶ್ ಸಹಕಾರಿ ಭಾರತಿ ಅಧ್ಯಕ್ಷರಾಜೇಶ್ ಪೇರ್ಬುಡ ಉಪಸ್ಥಿತರಿದ್ದರು.

ಬಿಜೆಪಿ ಪ್ರಣಾಳಿಕೆಯಲ್ಲಿರುವ ಅಂಶಗಳು: ನಗರದ ಪ್ರಮುಖ ರಸ್ತೆಗಳನ್ನು ಸೌಂದರೀಕರಣಗೊಳಿಸಲಾಗುವುದು, ಸುಸಜ್ಜಿತ ಸಂತೆ ಮಾರುಕಟ್ಟೆ ಪ್ರಾಂಗಾಣ ಅಭಿವೃದ್ಧಿಗೊಳಿಸುವುದು, ಸುಸಜ್ಜಿತ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ಗೂಡ್ಸ್, ಟೆಂಪೋ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ನಿವೇಶನ ರಹಿತರಿಗೆ ನಿವೇಶನವನ್ನು ಒದಗಿಸುವುದು , ನಗರದ ಎಲ್ಲಾ ವಸತಿರಹಿತರಿಗೆ ವಸತಿಯನ್ನು ಒದಗಿಸುವುದು, ನಗರದ ಪ್ರತೀ ಮನೆಗಳಿಗೆ 12 ಗಂಟೆ ಕುಡಿಯುವ ನೀರಿನ ವ್ಯವಸ್ಥೆ, ನಗರದ ಪ್ರಮುಖ ಕೆರೆಗಳ ಅಭಿವೃದ್ಧಿ, ನಗರದ ಆಯ್ದ ಭಾಗದಲ್ಲಿ ಚಿಣ್ಣರ ಪಾರ್ಕ್ ನಿರ್ಮಾಣ , ಸಾಲು ಮರದ ತಿಮ್ಮಕ್ಕ ಟೀ ಪಾರ್ಕನ್ನು 2 ನೇ ಹಂತದ ಕಾರ್ಯಯೋಜನೆಯಾಗಿ ಅಭಿವೃದ್ಧಿ ಗೊಳಿಸುವುದು, ಸರಕಾರಿ ಮಾದರಿ ಶಾಲೆಗಳನ್ನು ಅಭಿವೃದ್ಧಿ ಗೊಳಿಸುವುದು , ನಗರದ ಹೈಟೆಕ್ ಸ್ಮಶಾನ ನಿರ್ಮಾಣ, ನಗರದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಾಣ ಮಾಡುವುದು.

Related posts

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya
error: Content is protected !!