23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

ಬೆಳ್ತಂಗಡಿ : ಇಲ್ಲಿಯ ಹಳೆಕೋಟೆಯ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಹಾಗೂ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ರವರ ಸಮ್ಮುಖದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರದ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಜನಿ ಕುಡ್ವ, ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಮಹಾಬಲ ಗೌಡ, ಮುಗುಳಿ ನಾರಾಯಣ ರಾವ್, ರಾಜೇಶ್ ಪ್ರಭು ಪಟ್ಟಣ ಪಂಚಾಯತ್ ಸದಸ್ಯರಾದ, ಶರತ್ ಕುಮಾರ್, ಲೋಕೇಶ್, ನಾಮ ನಿರ್ದೇಶನ ಸದಸ್ಯರಾದ ಪ್ರಕಾಶ್ ಸಹಕಾರಿ ಭಾರತಿ ಅಧ್ಯಕ್ಷರಾಜೇಶ್ ಪೇರ್ಬುಡ ಉಪಸ್ಥಿತರಿದ್ದರು.

ಬಿಜೆಪಿ ಪ್ರಣಾಳಿಕೆಯಲ್ಲಿರುವ ಅಂಶಗಳು: ನಗರದ ಪ್ರಮುಖ ರಸ್ತೆಗಳನ್ನು ಸೌಂದರೀಕರಣಗೊಳಿಸಲಾಗುವುದು, ಸುಸಜ್ಜಿತ ಸಂತೆ ಮಾರುಕಟ್ಟೆ ಪ್ರಾಂಗಾಣ ಅಭಿವೃದ್ಧಿಗೊಳಿಸುವುದು, ಸುಸಜ್ಜಿತ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ಗೂಡ್ಸ್, ಟೆಂಪೋ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ನಿವೇಶನ ರಹಿತರಿಗೆ ನಿವೇಶನವನ್ನು ಒದಗಿಸುವುದು , ನಗರದ ಎಲ್ಲಾ ವಸತಿರಹಿತರಿಗೆ ವಸತಿಯನ್ನು ಒದಗಿಸುವುದು, ನಗರದ ಪ್ರತೀ ಮನೆಗಳಿಗೆ 12 ಗಂಟೆ ಕುಡಿಯುವ ನೀರಿನ ವ್ಯವಸ್ಥೆ, ನಗರದ ಪ್ರಮುಖ ಕೆರೆಗಳ ಅಭಿವೃದ್ಧಿ, ನಗರದ ಆಯ್ದ ಭಾಗದಲ್ಲಿ ಚಿಣ್ಣರ ಪಾರ್ಕ್ ನಿರ್ಮಾಣ , ಸಾಲು ಮರದ ತಿಮ್ಮಕ್ಕ ಟೀ ಪಾರ್ಕನ್ನು 2 ನೇ ಹಂತದ ಕಾರ್ಯಯೋಜನೆಯಾಗಿ ಅಭಿವೃದ್ಧಿ ಗೊಳಿಸುವುದು, ಸರಕಾರಿ ಮಾದರಿ ಶಾಲೆಗಳನ್ನು ಅಭಿವೃದ್ಧಿ ಗೊಳಿಸುವುದು , ನಗರದ ಹೈಟೆಕ್ ಸ್ಮಶಾನ ನಿರ್ಮಾಣ, ನಗರದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಾಣ ಮಾಡುವುದು.

Related posts

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya
error: Content is protected !!