22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಮೇ 04 ರಂದು ನಡೆದ ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗಿಯಾದರು.

ಬೆಳ್ತಂಗಡಿ ಕ್ಷೇತ್ರದ ಬಂಧುಗಳು ಮೊದಲ ಬಾರಿಗೆ ಗೆಲ್ಲಿಸಿದಾಗ ರಸ್ತೆ ಕಿಂಡಿ ಅಣೆಕಟ್ಟು, ಶಾಲಾ- ಕಾಲೇಜು ಅಭಿವೃದ್ಧಿ, ಗ್ರಂಥಾಲಯ ನಿರ್ಮಾಣ, ಧಾರ್ಮಿಕ ಶ್ರದ್ಧಾ ಕೇಂದ್ರಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಬಾರಿಯೂ ಗೆಲ್ಲಿಸಿದರೆ ತಾಲೂಕನ್ನು ದೇಶಕ್ಕೆ ಮಾದರಿಯಾಗಿ ಅಭಿವೃದ್ಧಿಪಡಿಸುತ್ತೇನೆ ಎಂದು ಹರೀಶ್ ಪೂಂಜ ರವರು ಹೇಳಿದರು.

ಬಹಿರಂಗ ಪ್ರಚಾರ ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಹಿರಿಯರಾದ ಸುಬ್ರಮಣ್ಯ ಅಗರ್ತ, ಚಲನಚಿತ್ರ ನಟರಾದ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್ ಜಯಾನಂದ್ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!