ಉಜಿರೆ: ಉಜಿರೆಯ ಎಸ್ ಡಿ ಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ರಾಷ್ಟ್ರೀಯ ವಾಲಿಬಾಲ್ ಆಟಗಾರ ಎನ್. ಐ. ಎಸ್ ಕೋಚ್ ವೆಂಕಟೇಶ್ ಭಟ್ ಅವರು ಚಾಲನೆ ನೀಡಿದರು.
ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜರಗಿದ ಸಾವಿರಾರು ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನದ ಬಳಿಕ ವಿದ್ಯುಕ್ತವಾಗಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಕೋರಿದರು.
ದೈಹಿಕ ಕ್ಷಮತೆ ಹಾಗೂ ಆರೋಗ್ಯಕ್ಕಾಗಿ ಕ್ರೀಡೆಯನ್ನು ವಿದ್ಯಾರ್ಥಿಗಳು ತಮ್ಮ ದಿನಚರಿಯ ಭಾಗವಾಗಿಸಬೇಕೆಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶಪಾಲ ಡಾ. ಕುಮಾರ ಹೆಗ್ಡೆ ಅವರು ತಿಳಿಸಿದರು.
ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್, ಶಾರದಾ ಮತ್ತು ಸುದಿನ ಉಪಸ್ಥಿತರಿದ್ದರು.













