September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

ನಾವೂರು: ಇಲ್ಲಿಯ ನಾವೂರು ಗ್ರಾಮದ ಪಡಂಬಿಲ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಆಸ್ಪತ್ರೆಗೆ ತರುವಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ.

ಇಂದಬೆಟ್ಟು ಗ್ರಾಮದ ಬಂಗಾಡಿ ಲಿಂಗತ್ತ್ಯಾ ರು ನಿವಾಸಿ ಸುಂದರಿ (50ವ)ಮೃತಪಟ್ಟರು ಎಂದು ಹೇಳಲಾಗುತ್ತಿದೆ.

ಬೆಳ್ತಂಗಡಿ- ಕಿಲ್ಲೂರು ಲೈನ್‌ನಲ್ಲಿ ಓಡಾಟ ನಡೆಸುತ್ತಿರುವ ಖಾಸಗಿ ಬಸ್ ಎಂಡ್‌ಕಟ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಧರೆಗೆ ಗುದ್ದಿ ಈ ದುರ್ಘಟನೆ ನಡೆದಿದೆ. ಸುಂದರಿ ಅವರು ಬಂಗಾಡಿ ಲಿಂಗತ್ತ್ಯಾ ರು ಮನೆಯಿಂದ ಲಾಯಿಲ ಪುತ್ರಬೈಲಿನ ತನ್ನ ಮಗಳ ಮನೆಗೆ ಬಸ್ಸಿನಲ್ಲಿ ಬರುತ್ತಿರು ಸಂದರ್ಭ ಈ ಘಟನೆ ನಡೆದಿದೆ

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!