ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಧ್ಯೇಯ, ಕಾರ್ಯತತ್ಪರತೆಯನ್ನು ಹಾಗೂ ಶಾಸಕ ಹರೀಶ್ ಪೂಂಜ ಅವರ ಕಾರ್ಯವೈಖರಿಯನ್ನು ಮೆಚ್ಚಿ ಕೊಯ್ಯೂರು ಗ್ರಾಮದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಬಿಜೆಪಿ ಶಾಲು ಹಾಕಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಆಚಾರ್ಯ, ಬೂತ್ ಸಮಿತಿ ಅಧ್ಯಕ್ಷ ಸಂತೋಷ್, ಗ್ರಾಮ ಪಂಚಾಯತ್ ಮಾಜಿ‌ ಉಪಾಧ್ಯಕ್ಷ ವಿಶ್ವನಾಥ ಗೌಡ, ಮಾಜಿ ಸದಸ್ಯ ಸೇಸಪ್ಪ‌ ಮಲೆಬೆಟ್ಟು, ವಸಂತ ಉಪಸ್ಥಿತರಿದ್ದರು.

Leave a Comment

error: Content is protected !!