23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

ಬೆಳ್ತಂಗಡಿ; ಜನತಾದಳ ಜಾತ್ಯಾತೀತ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಬೆಳ್ತಂಗಡಿ ತಾಲೂಕಿನ ಪ್ರಮುಖ ನಗರಗಳಲ್ಲಿ ಮತಯಾಚನೆಯ ರೋಡ್ ಶೋ ನಡೆಸಿದರು.
ಜೊತೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಾಜಕೀಯ ಪ್ರಮುಖರ, ಹಿರಿಯ ಕಾರ್ಯಕರ್ತರ ಭೇಟಿ ಮುಂದುವರಿಸಿದರು.

ಮಡಂತ್ಯಾರು, ಮದ್ದಡ್ಕ, ಸಬರಬೈಲು, ಕೊಲ್ಪೆದಬೈಲು, ಕುಪ್ಪೆಟ್ಟಿ, ಕಲ್ಲೇರಿ, ಕರಾಯ, ಗೇರುಕಟ್ಟೆ, ಉಜಿರೆ ಅತ್ತಾಜೆ, ಟಿ.ಬಿ ಕ್ರಾಸ್, ಕಿಲ್ಲೂರು, ಕಾಜೂರು, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ, ಅಣಿಯೂರು, ಬೆಳ್ತಂಗಡಿ ನಗರ, ಮುಂತಾದೆಡೆ ರೋಡ್ ಶೋ ನಡೆಸಿದರು.

ಧ್ವನಿವರ್ಧಕದ ಮೂಲಕ ತಾಲೂಕಿನ ಮೂಲೆಮೂಲೆಗಳಲ್ಲಿ ನಿರಂತರ ಪ್ರಚಾರ ಕಾರ್ಯ ನಡೆಯುತ್ತಿದೆ‌. ಅಭ್ಯರ್ಥಿಯಾಗಿರುವ ಗ್ರಾಮೀಣ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರ ಸ್ವಪರಿಚಯ ಇರುವ ಕರಪತ್ರ, ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ನೀಡುವ ಸೌಲಭ್ಯಗಳ ಪ್ರಣಾಳಿಕೆ, ಮಾದರಿ ಮತಪತ್ರಗಳನ್ನು ಹಂಚಿಕೆ ಮಾಡಲಾಯಿತು.

ಸೋಮವಾರ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು, ಮಂಗಳವಾರ ಸಂಜೆಯವರೆಗೂ ಮನೆ ಮನೆ ಭೇಟಿಗೆ ಯೋಜನೆ ರೂಪಿಸಲಾಗಿದೆ. ಪಕ್ಷದ ಕಾರ್ಯಾಧ್ಯಕ್ಷ ರಾಮ ಆಚಾರಿ, ಸಂಘಟನಾ ಕಾರ್ಯದರ್ಶಿ ಹೆಚ್.ಎನ್ ನಾಗರಾಜ್, ಹಿರಿಯರಾದ ಪ್ರಕಾಶ್ ಹೆಬ್ಬಾರ್ ಅರಸಿನಮಕ್ಕಿ, ಹಿರಿಯ‌ ಸಂಘಟಕರಾದ ಮುಂಡಾಜೆ ಸಹಕಾರಿ ಸಂಘದ ನಿರ್ದೇಶಕ ಸಂಜೀವ ಗೌಡ, ರಾಮಕೃಷ್ಣ ಗೌಡ ನೆರಿಯ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಬಂಡಸಾಲೆ, ಕಾರ್ಯದರ್ಶಿ ಶಾಹಿದ್ ಪಾದೆ, ಪುನೀತ್ ಪೂಜಾರಿ, ವಸಂತ ಪೂಜಾರಿ, ಅಮ್ಮಿ‌ ನಾಯ್ಕ, ಸಂಜೀವ ಕುಲಾಲ್, ಲುಕ್ಮಾನುಲ್ ಹಕೀಂ ಧರ್ಮಸ್ಥಳ, ಹಂಝ, ಇಬ್ರಾಹಿಂ ಕನ್ಯಾಡಿ, ರಾಮ ಕುಮಾರ್, ರಿಝ್ವಾನ್, ಆಸಿಫ್, ಶರೀಫ್, ಮುಹಮ್ಮದ್ ಕಾಜೂರು, ಸಿರಾಜ್, ಕಿಟ್ಟ, ಮೊದಲಾದವರು ಭಾಗಿಯಾಗಿದ್ದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya
error: Content is protected !!