25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

ಬೆಳ್ತಂಗಡಿ; ಜನತಾದಳ ಜಾತ್ಯಾತೀತ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಬೆಳ್ತಂಗಡಿ ತಾಲೂಕಿನ ಪ್ರಮುಖ ನಗರಗಳಲ್ಲಿ ಮತಯಾಚನೆಯ ರೋಡ್ ಶೋ ನಡೆಸಿದರು.
ಜೊತೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಾಜಕೀಯ ಪ್ರಮುಖರ, ಹಿರಿಯ ಕಾರ್ಯಕರ್ತರ ಭೇಟಿ ಮುಂದುವರಿಸಿದರು.

ಮಡಂತ್ಯಾರು, ಮದ್ದಡ್ಕ, ಸಬರಬೈಲು, ಕೊಲ್ಪೆದಬೈಲು, ಕುಪ್ಪೆಟ್ಟಿ, ಕಲ್ಲೇರಿ, ಕರಾಯ, ಗೇರುಕಟ್ಟೆ, ಉಜಿರೆ ಅತ್ತಾಜೆ, ಟಿ.ಬಿ ಕ್ರಾಸ್, ಕಿಲ್ಲೂರು, ಕಾಜೂರು, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ, ಅಣಿಯೂರು, ಬೆಳ್ತಂಗಡಿ ನಗರ, ಮುಂತಾದೆಡೆ ರೋಡ್ ಶೋ ನಡೆಸಿದರು.

ಧ್ವನಿವರ್ಧಕದ ಮೂಲಕ ತಾಲೂಕಿನ ಮೂಲೆಮೂಲೆಗಳಲ್ಲಿ ನಿರಂತರ ಪ್ರಚಾರ ಕಾರ್ಯ ನಡೆಯುತ್ತಿದೆ‌. ಅಭ್ಯರ್ಥಿಯಾಗಿರುವ ಗ್ರಾಮೀಣ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರ ಸ್ವಪರಿಚಯ ಇರುವ ಕರಪತ್ರ, ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ನೀಡುವ ಸೌಲಭ್ಯಗಳ ಪ್ರಣಾಳಿಕೆ, ಮಾದರಿ ಮತಪತ್ರಗಳನ್ನು ಹಂಚಿಕೆ ಮಾಡಲಾಯಿತು.

ಸೋಮವಾರ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು, ಮಂಗಳವಾರ ಸಂಜೆಯವರೆಗೂ ಮನೆ ಮನೆ ಭೇಟಿಗೆ ಯೋಜನೆ ರೂಪಿಸಲಾಗಿದೆ. ಪಕ್ಷದ ಕಾರ್ಯಾಧ್ಯಕ್ಷ ರಾಮ ಆಚಾರಿ, ಸಂಘಟನಾ ಕಾರ್ಯದರ್ಶಿ ಹೆಚ್.ಎನ್ ನಾಗರಾಜ್, ಹಿರಿಯರಾದ ಪ್ರಕಾಶ್ ಹೆಬ್ಬಾರ್ ಅರಸಿನಮಕ್ಕಿ, ಹಿರಿಯ‌ ಸಂಘಟಕರಾದ ಮುಂಡಾಜೆ ಸಹಕಾರಿ ಸಂಘದ ನಿರ್ದೇಶಕ ಸಂಜೀವ ಗೌಡ, ರಾಮಕೃಷ್ಣ ಗೌಡ ನೆರಿಯ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಬಂಡಸಾಲೆ, ಕಾರ್ಯದರ್ಶಿ ಶಾಹಿದ್ ಪಾದೆ, ಪುನೀತ್ ಪೂಜಾರಿ, ವಸಂತ ಪೂಜಾರಿ, ಅಮ್ಮಿ‌ ನಾಯ್ಕ, ಸಂಜೀವ ಕುಲಾಲ್, ಲುಕ್ಮಾನುಲ್ ಹಕೀಂ ಧರ್ಮಸ್ಥಳ, ಹಂಝ, ಇಬ್ರಾಹಿಂ ಕನ್ಯಾಡಿ, ರಾಮ ಕುಮಾರ್, ರಿಝ್ವಾನ್, ಆಸಿಫ್, ಶರೀಫ್, ಮುಹಮ್ಮದ್ ಕಾಜೂರು, ಸಿರಾಜ್, ಕಿಟ್ಟ, ಮೊದಲಾದವರು ಭಾಗಿಯಾಗಿದ್ದರು.

Related posts

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya
error: Content is protected !!