September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇದರ ಸಹಯೋಗದೊಂದಿಗೆ, ನಮ್ಮ ನಡೆ ಮತಗಟ್ಟೆಯ ಕಡೆ ಮತದಾರರ ಜಾಗೃತಿ ಆಂದೋಲನ ಅಂಗವಾಗಿ ಸಂತೆಕಟ್ಟೆ ಬಳಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಮೇ.೭ರಂದು ಕಾಲ್ನಡಿಗೆ ಜಾಥಾ ಜರುಗಿತು.

ಬಳಿಕ ಎನ್. ಎಸ್.ಎಸ್. ವಿದ್ಯಾರ್ಥಿಗಳಿಂದ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಯಿತು. ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾ.ನಿ.ಅಧಿಕಾರಿ ಕುಸುಮಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್ ತಾಲೂಕು ಪಂಚಾಯತ್, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಎನ್. ಆರ್.ಎಲ್.ಎಂ.ಸಂಜೀವಿನಿ ಒಕ್ಕೂಟದ ಅಧಿಕಾರಿಗಳು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!