26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ


ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ, ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ ಪತ್ನಿ ಸುಲೋಚನಾ ಇವರು ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮೇ.8ರಂದು ಬೆಂಗಳೂರಿನ ಎಸ್‌ಎಸ್‌ಬಿ ತರಬೇತಿ ಅಕಾಡೆಮಿಯಲ್ಲಿ ನಡೆಯುವ ವಿಶ್ವ ತಾಯಂದಿರ ದಿನದಂದು ನಾರಿ ಶಕ್ತಿ ಕಾರ್ಯಕ್ರಮಲ್ಲಿ ದಕ್ಷಿಣ ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ಗಳ ಸಮಕ್ಷಮ ಸುಲೋಚನಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ತನ್ನ ಪತಿ ಜಮ್ಮು ಕಾಶ್ಮೀರ ಸೇರಿದಂತೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಯಾವುದೇ ಚಿಂತೆಗೆ ಒಳಗಾಗದೆ ಪತಿಯನ್ನು ಪ್ರೋತ್ಸಾಹಿಸುತ್ತಾ ಒಬ್ಬ ಮಹಿಳೆಯಾಗಿ ವೀರ ನಾರಿಯಾಗಿ,ಮಕ್ಕಳಿಗೆ ವೀರ ಮಾತೆಯಾಗಿ, ಉತ್ತಮ ಸಂಸ್ಕಾರಗಳನ್ನು ನೀಡಿ ಒಳ್ಳೆಯ ವಿದ್ಯಾವಂತ ಸಂಸ್ಕಾರಯುತ ಪ್ರಜೆಗಳನ್ನಾಗಿಸುವಲ್ಲಿ, ಒಬ್ಬ ಮಹಿಳೆಯಾಗಿ ಸಮಾಜಕ್ಕೆ ಆದರ್ಶಪ್ರಾಯರಾಗಿ ಬಾಳಿರುವುದನ್ನು ಗುರುತಿಸಿ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೇ 8ರಂದು ಬೆಂಗಳೂರು SSB ತರಬೇತಿ ಅಕಾಡೆಮಿಯಲ್ಲಿದ, ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ ಗಳ ಸಮಕ್ಷಮ ಗೌರವಿಸಲ್ಪಡುವವರಿದ್ದಾರೆ

Related posts

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya
error: Content is protected !!