23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ


ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ, ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ ಪತ್ನಿ ಸುಲೋಚನಾ ಇವರು ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮೇ.8ರಂದು ಬೆಂಗಳೂರಿನ ಎಸ್‌ಎಸ್‌ಬಿ ತರಬೇತಿ ಅಕಾಡೆಮಿಯಲ್ಲಿ ನಡೆಯುವ ವಿಶ್ವ ತಾಯಂದಿರ ದಿನದಂದು ನಾರಿ ಶಕ್ತಿ ಕಾರ್ಯಕ್ರಮಲ್ಲಿ ದಕ್ಷಿಣ ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ಗಳ ಸಮಕ್ಷಮ ಸುಲೋಚನಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ತನ್ನ ಪತಿ ಜಮ್ಮು ಕಾಶ್ಮೀರ ಸೇರಿದಂತೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಯಾವುದೇ ಚಿಂತೆಗೆ ಒಳಗಾಗದೆ ಪತಿಯನ್ನು ಪ್ರೋತ್ಸಾಹಿಸುತ್ತಾ ಒಬ್ಬ ಮಹಿಳೆಯಾಗಿ ವೀರ ನಾರಿಯಾಗಿ,ಮಕ್ಕಳಿಗೆ ವೀರ ಮಾತೆಯಾಗಿ, ಉತ್ತಮ ಸಂಸ್ಕಾರಗಳನ್ನು ನೀಡಿ ಒಳ್ಳೆಯ ವಿದ್ಯಾವಂತ ಸಂಸ್ಕಾರಯುತ ಪ್ರಜೆಗಳನ್ನಾಗಿಸುವಲ್ಲಿ, ಒಬ್ಬ ಮಹಿಳೆಯಾಗಿ ಸಮಾಜಕ್ಕೆ ಆದರ್ಶಪ್ರಾಯರಾಗಿ ಬಾಳಿರುವುದನ್ನು ಗುರುತಿಸಿ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೇ 8ರಂದು ಬೆಂಗಳೂರು SSB ತರಬೇತಿ ಅಕಾಡೆಮಿಯಲ್ಲಿದ, ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ ಗಳ ಸಮಕ್ಷಮ ಗೌರವಿಸಲ್ಪಡುವವರಿದ್ದಾರೆ

Related posts

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya
error: Content is protected !!