September 6, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

ಉಜಿರೆ: 53 ವರ್ಷ ಪ್ರಾಯದ ಮಹಿಳೆಯೊಬ್ಬರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಹರೀಶ್ ಬಿ.ಎಸ್ ಮತ್ತು ಡಾ. ಶತಾನಂದ ಪ್ರಸಾದ್ ರಾವ್ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸಿದರು.

ಟೋಟಲ್ ನೀ ರಿಪ್ಲೇಸ್‌ ಮೆಂಟ್ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕೃತಕ ಲೋಹದ ಮೊಣಕಾಲಿನ ಕೀಲುಗಳನ್ನು ಅಳವಡಿಸಲಾಗುತ್ತದೆ. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಲವಾರು ಟೋಟಲ್ ಈಗಾಗಲೇ ರಿಪ್ಲೇಸ್‌ ಮೆಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ.

ಇದೀಗ ನುರಿತ ಶಸ್ತ್ರ ಚಿಕಿತ್ಸಾ ತಜ್ಞರು ಈ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಸಾಮಾನ್ಯ ಶಸ್ತ್ರಚಿಕಿತ್ಸೆ, ಥೈರಾಯ್ಡ್ ಶಸ್ತ್ರಚಿಕಿತ್ಸೆ, ಕಿವಿಯೆಲುಬು ದುರಸ್ತಿ, ಕಿಬ್ಬೊಟ್ಟೆ, ತೊಡೆಸಂಧಿಯ ಹರ್ನಿಯಾ ಶಸ್ತ್ರಚಿಕಿತ್ಸೆ, ಪಿತ್ತಕೋಶ ಸರ್ಜರಿ, ಅಪೆಂಡಿಕ್ಸ್ ಸರ್ಜರಿ, ಉಬ್ಬಿರುವ ರಕ್ತನಾಳದ ಸರ್ಜರಿ, ಮೂತ್ರಕೋಶದ ಸರ್ಜರಿ, ಮಧುಮೇಹ ಕಾಲುಗಳ ಸರ್ಜರಿ, ಎಲ್ಲಾ ತರಹದ ಅಪಘಾತದ ಚಿಕಿತ್ಸೆ, ಚರ್ಮದ ನಾಟಿ, ಗುದನಾಳದ ಶಸ್ತ್ರಚಿಕಿತ್ಸೆ ಮುಂತಾದ ಶಸ್ತ್ರಚಿಕಿತ್ಸಾ ವಿಭಾಗದ ಸೇವೆಗಳು ಈ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದು ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿ ಮೇಳ ಡಿಸ್ಕೌಂಟ್ ಸೇಲ್ : ಗ್ರಾಹಕರಿಗೆ ಶೇ.50 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಮಾಲಾಡಿ ಸ. ಉ. ಪ್ರಾ. ಶಾಲೆಯಲ್ಲಿ ಪೋಷಕ ರಕ್ಷಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಆಟೋರಿಕ್ಷಾ ಕಾರ್ಮಿಕರ ಬದುಕು ಉಳಿಸಲು ದರ ಪರಿಷ್ಕರಣೆ ಅನಿವಾರ್ಯ: ಬಿ.ಎಂ.ಎಸ್

Suddi Udaya
error: Content is protected !!