37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ,

ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ ಪತ್ನಿ ಸುಲೋಚನಾ ಇವರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮೇ 8 ರಂದು ಬೆಂಗಳೂರಿನ ಎಸ್‌ಎಸ್‌ಬಿ ತರಬೇತಿ ಅಕಾಡೆಮಿಯಲ್ಲಿ ನಡೆದ ವಿಶ್ವ ತಾಯಂದಿರ ದಿನದಂದು ನಾರಿ ಶಕ್ತಿ ಕಾರ್ಯಕ್ರಮಲ್ಲಿ ದಕ್ಷಿಣ ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ಗಳ ಸಮಕ್ಷಮ ಸುಲೋಚನಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತನ್ನ ಪತಿ ಜಮ್ಮು ಕಾಶ್ಮೀರ ಸೇರಿದಂತೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಯಾವುದೇ ಚಿಂತೆಗೆ ಒಳಗಾಗದೆ ಪತಿಯನ್ನು ಪ್ರೋತ್ಸಾಹಿಸುತ್ತಾ ಒಬ್ಬ ಮಹಿಳೆಯಾಗಿ ವೀರ ನಾರಿಯಾಗಿ,ಮಕ್ಕಳಿಗೆ ವೀರ ಮಾತೆಯಾಗಿ,ಉತ್ತಮ ಸಂಸ್ಕಾರ ಗಳನ್ನು ನೀಡಿ ಒಳ್ಳೆಯ ವಿದ್ಯಾವಂತ ಸಂಸ್ಕಾರಯುತ ಪ್ರಜೆಗಳನ್ನಾಗಿಸುವಲ್ಲಿ, ಒಬ್ಬ ಮಹಿಳೆಯಾಗಿ ಸಮಾಜಕ್ಕೆ ಆದರ್ಶಪ್ರಾಯರಾಗಿ ಬಾಳಿರುವುದನ್ನು ಗುರುತಿಸಿ ಅವರನ್ನು ಈ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Related posts

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!