26.3 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿ

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ,

ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ ಪತ್ನಿ ಸುಲೋಚನಾ ಇವರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮೇ 8 ರಂದು ಬೆಂಗಳೂರಿನ ಎಸ್‌ಎಸ್‌ಬಿ ತರಬೇತಿ ಅಕಾಡೆಮಿಯಲ್ಲಿ ನಡೆದ ವಿಶ್ವ ತಾಯಂದಿರ ದಿನದಂದು ನಾರಿ ಶಕ್ತಿ ಕಾರ್ಯಕ್ರಮಲ್ಲಿ ದಕ್ಷಿಣ ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ಗಳ ಸಮಕ್ಷಮ ಸುಲೋಚನಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತನ್ನ ಪತಿ ಜಮ್ಮು ಕಾಶ್ಮೀರ ಸೇರಿದಂತೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಯಾವುದೇ ಚಿಂತೆಗೆ ಒಳಗಾಗದೆ ಪತಿಯನ್ನು ಪ್ರೋತ್ಸಾಹಿಸುತ್ತಾ ಒಬ್ಬ ಮಹಿಳೆಯಾಗಿ ವೀರ ನಾರಿಯಾಗಿ,ಮಕ್ಕಳಿಗೆ ವೀರ ಮಾತೆಯಾಗಿ,ಉತ್ತಮ ಸಂಸ್ಕಾರ ಗಳನ್ನು ನೀಡಿ ಒಳ್ಳೆಯ ವಿದ್ಯಾವಂತ ಸಂಸ್ಕಾರಯುತ ಪ್ರಜೆಗಳನ್ನಾಗಿಸುವಲ್ಲಿ, ಒಬ್ಬ ಮಹಿಳೆಯಾಗಿ ಸಮಾಜಕ್ಕೆ ಆದರ್ಶಪ್ರಾಯರಾಗಿ ಬಾಳಿರುವುದನ್ನು ಗುರುತಿಸಿ ಅವರನ್ನು ಈ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Related posts

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!