25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ,

ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ ಪತ್ನಿ ಸುಲೋಚನಾ ಇವರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮೇ 8 ರಂದು ಬೆಂಗಳೂರಿನ ಎಸ್‌ಎಸ್‌ಬಿ ತರಬೇತಿ ಅಕಾಡೆಮಿಯಲ್ಲಿ ನಡೆದ ವಿಶ್ವ ತಾಯಂದಿರ ದಿನದಂದು ನಾರಿ ಶಕ್ತಿ ಕಾರ್ಯಕ್ರಮಲ್ಲಿ ದಕ್ಷಿಣ ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ಗಳ ಸಮಕ್ಷಮ ಸುಲೋಚನಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತನ್ನ ಪತಿ ಜಮ್ಮು ಕಾಶ್ಮೀರ ಸೇರಿದಂತೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಯಾವುದೇ ಚಿಂತೆಗೆ ಒಳಗಾಗದೆ ಪತಿಯನ್ನು ಪ್ರೋತ್ಸಾಹಿಸುತ್ತಾ ಒಬ್ಬ ಮಹಿಳೆಯಾಗಿ ವೀರ ನಾರಿಯಾಗಿ,ಮಕ್ಕಳಿಗೆ ವೀರ ಮಾತೆಯಾಗಿ,ಉತ್ತಮ ಸಂಸ್ಕಾರ ಗಳನ್ನು ನೀಡಿ ಒಳ್ಳೆಯ ವಿದ್ಯಾವಂತ ಸಂಸ್ಕಾರಯುತ ಪ್ರಜೆಗಳನ್ನಾಗಿಸುವಲ್ಲಿ, ಒಬ್ಬ ಮಹಿಳೆಯಾಗಿ ಸಮಾಜಕ್ಕೆ ಆದರ್ಶಪ್ರಾಯರಾಗಿ ಬಾಳಿರುವುದನ್ನು ಗುರುತಿಸಿ ಅವರನ್ನು ಈ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Related posts

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!