September 6, 2026
ತಾಲೂಕು ಸುದ್ದಿ

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ,

ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ ಪತ್ನಿ ಸುಲೋಚನಾ ಇವರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮೇ 8 ರಂದು ಬೆಂಗಳೂರಿನ ಎಸ್‌ಎಸ್‌ಬಿ ತರಬೇತಿ ಅಕಾಡೆಮಿಯಲ್ಲಿ ನಡೆದ ವಿಶ್ವ ತಾಯಂದಿರ ದಿನದಂದು ನಾರಿ ಶಕ್ತಿ ಕಾರ್ಯಕ್ರಮಲ್ಲಿ ದಕ್ಷಿಣ ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ಗಳ ಸಮಕ್ಷಮ ಸುಲೋಚನಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತನ್ನ ಪತಿ ಜಮ್ಮು ಕಾಶ್ಮೀರ ಸೇರಿದಂತೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಯಾವುದೇ ಚಿಂತೆಗೆ ಒಳಗಾಗದೆ ಪತಿಯನ್ನು ಪ್ರೋತ್ಸಾಹಿಸುತ್ತಾ ಒಬ್ಬ ಮಹಿಳೆಯಾಗಿ ವೀರ ನಾರಿಯಾಗಿ,ಮಕ್ಕಳಿಗೆ ವೀರ ಮಾತೆಯಾಗಿ,ಉತ್ತಮ ಸಂಸ್ಕಾರ ಗಳನ್ನು ನೀಡಿ ಒಳ್ಳೆಯ ವಿದ್ಯಾವಂತ ಸಂಸ್ಕಾರಯುತ ಪ್ರಜೆಗಳನ್ನಾಗಿಸುವಲ್ಲಿ, ಒಬ್ಬ ಮಹಿಳೆಯಾಗಿ ಸಮಾಜಕ್ಕೆ ಆದರ್ಶಪ್ರಾಯರಾಗಿ ಬಾಳಿರುವುದನ್ನು ಗುರುತಿಸಿ ಅವರನ್ನು ಈ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Related posts

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya
error: Content is protected !!