July 23, 2026
ತಾಲೂಕು ಸುದ್ದಿ

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ,

ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ ಪತ್ನಿ ಸುಲೋಚನಾ ಇವರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮೇ 8 ರಂದು ಬೆಂಗಳೂರಿನ ಎಸ್‌ಎಸ್‌ಬಿ ತರಬೇತಿ ಅಕಾಡೆಮಿಯಲ್ಲಿ ನಡೆದ ವಿಶ್ವ ತಾಯಂದಿರ ದಿನದಂದು ನಾರಿ ಶಕ್ತಿ ಕಾರ್ಯಕ್ರಮಲ್ಲಿ ದಕ್ಷಿಣ ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ಗಳ ಸಮಕ್ಷಮ ಸುಲೋಚನಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತನ್ನ ಪತಿ ಜಮ್ಮು ಕಾಶ್ಮೀರ ಸೇರಿದಂತೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಯಾವುದೇ ಚಿಂತೆಗೆ ಒಳಗಾಗದೆ ಪತಿಯನ್ನು ಪ್ರೋತ್ಸಾಹಿಸುತ್ತಾ ಒಬ್ಬ ಮಹಿಳೆಯಾಗಿ ವೀರ ನಾರಿಯಾಗಿ,ಮಕ್ಕಳಿಗೆ ವೀರ ಮಾತೆಯಾಗಿ,ಉತ್ತಮ ಸಂಸ್ಕಾರ ಗಳನ್ನು ನೀಡಿ ಒಳ್ಳೆಯ ವಿದ್ಯಾವಂತ ಸಂಸ್ಕಾರಯುತ ಪ್ರಜೆಗಳನ್ನಾಗಿಸುವಲ್ಲಿ, ಒಬ್ಬ ಮಹಿಳೆಯಾಗಿ ಸಮಾಜಕ್ಕೆ ಆದರ್ಶಪ್ರಾಯರಾಗಿ ಬಾಳಿರುವುದನ್ನು ಗುರುತಿಸಿ ಅವರನ್ನು ಈ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Related posts

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
error: Content is protected !!