September 6, 2026
ತಾಲೂಕು ಸುದ್ದಿ

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ,

ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ ಪತ್ನಿ ಸುಲೋಚನಾ ಇವರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮೇ 8 ರಂದು ಬೆಂಗಳೂರಿನ ಎಸ್‌ಎಸ್‌ಬಿ ತರಬೇತಿ ಅಕಾಡೆಮಿಯಲ್ಲಿ ನಡೆದ ವಿಶ್ವ ತಾಯಂದಿರ ದಿನದಂದು ನಾರಿ ಶಕ್ತಿ ಕಾರ್ಯಕ್ರಮಲ್ಲಿ ದಕ್ಷಿಣ ಭಾರತದ ಸೇನಾಪಡೆಯ ಪ್ರಧಾನ ಕಮಾಂಡರ್ಗಳ ಸಮಕ್ಷಮ ಸುಲೋಚನಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತನ್ನ ಪತಿ ಜಮ್ಮು ಕಾಶ್ಮೀರ ಸೇರಿದಂತೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಯಾವುದೇ ಚಿಂತೆಗೆ ಒಳಗಾಗದೆ ಪತಿಯನ್ನು ಪ್ರೋತ್ಸಾಹಿಸುತ್ತಾ ಒಬ್ಬ ಮಹಿಳೆಯಾಗಿ ವೀರ ನಾರಿಯಾಗಿ,ಮಕ್ಕಳಿಗೆ ವೀರ ಮಾತೆಯಾಗಿ,ಉತ್ತಮ ಸಂಸ್ಕಾರ ಗಳನ್ನು ನೀಡಿ ಒಳ್ಳೆಯ ವಿದ್ಯಾವಂತ ಸಂಸ್ಕಾರಯುತ ಪ್ರಜೆಗಳನ್ನಾಗಿಸುವಲ್ಲಿ, ಒಬ್ಬ ಮಹಿಳೆಯಾಗಿ ಸಮಾಜಕ್ಕೆ ಆದರ್ಶಪ್ರಾಯರಾಗಿ ಬಾಳಿರುವುದನ್ನು ಗುರುತಿಸಿ ಅವರನ್ನು ಈ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

Related posts

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya
error: Content is protected !!