22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

ಬೆಳ್ತಂಗಡಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ‌ಮಸ್ಟರಿಂಗ್
ಮೇ 9 ರಂದು ಉಜಿರೆ ಧ.ಮಂ ಪ.ಪೂ.ಕಾಲೇಜಿನಲ್ಲಿ ಜರುಗಿತು.


ಬೆಳ್ತಂಗಡಿ ಕ್ಷೇತ್ರದ 241 ಬೂತುಗಳ‌ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ‌ ಮತ ಯಂತ್ರಗಳನ್ನು ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪರಿಕರಗಳನ್ನು ವಿತರಿಸಲಾಯಿತು.

ಪ್ರತಿ ಮತಗಟ್ಟೆಗಳಿಗೆ ಅಧಿಕಾರಿಗಳು ಹೋಗಲು ಬಸ್ ಹಾಗೂ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ ಆರಂಭಗೊಂಡ ಮತಯಂತ್ರಗಳ ವಿತರಣಾ ಕಾಯ೯ ಮಧ್ಯಾಹ್ನ ಮುಕ್ತಾಯಗೊಂಡಿತು. ಅಧಿಕಾರಿಗಳು ತಮಗೆ ಮೀಸಲಾದ ವಾಹನಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ಮತಗಟ್ಟೆಗಳಿಗೆ ತೆರಳಿದರು.


ತಾಲೂಕು ಚುನಾವಣಾ ಅಧಿಕಾರಿ ಯೋಗೇಶ್ ಇವರ ನೇತೃತ್ವದಲ್ಲಿ ಮಸ್ಟರಿಂಗ್ ಯಶಸ್ವಿಯಾಗಿ ನಡೆಯಿತು. ಪೊಲೀಸ್ ಅಧಿಕಾರಿಗಳು, ಸಿಆರ್ ಪಿ ತಂಡಗಳು ಭದ್ರತೆ ಒದಗಿಸಿದರು.

Related posts

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya
error: Content is protected !!