25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

ಉಜಿರೆ : ‌ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ವ್ಯಕ್ತಿಯೋರ್ವರು ರಸ್ತೆ ಬದಿಯಲ್ಲಿ ಮೃತ ಪಟ್ಟ ಘಟನೆ ‌ಮೇ 8ರಂದು‌ ಉಜಿರೆಯಲ್ಲಿ ನಡೆದಿದೆ.
‌ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ರಾಮ ಮುಗೇರ (50ವ.) ಮೃತ ಪಟ್ಟವರಾಗಿದ್ದಾರೆ .

ರಾಮ ಮುಗೇರವರು ಈ ದಿನ ಬೆಳಿಗ್ಗೆ 8ಕ್ಕೆ ಪೇಟೆಗೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವರು ಉಜಿರೆ ಗ್ರಾಮದ ಅನುಗ್ರಹ ಶಾಲೆಯ ಬಳಿ ಅವರ ಶವ ‌ಪತ್ತೆಯಾಗಿದೆ. ಅಮಲು ಪದಾರ್ಥ ಸೇವಿಸುವ ಅಭ್ಯಾಸವನ್ನು ಹೊಂದಿರುವ ಅವರು ಅನುಗ್ರಹ ಶಾಲಾ ಬಳಿ ಬಸ್ಸಿನಿಂದ ಇಳಿದು ರಸ್ತೆ ಬದಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ಸಮಯ ಬಾಯಾರಿಕೆಗೆ ಕುಡಿಯಲು ನೀರು ಸಿಗದೇ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಮೃತರ ಪತ್ನಿ ಶ್ರೀಮತಿ ಗುಲಾಬಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya
error: Content is protected !!