September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

ಉಜಿರೆ: ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಮೇ 08 ರಂದು ಹಮ್ಮಿಕೊಳ್ಳಲಾಯಿತು.


ಬೆಳ್ತಂಗಡಿ ತಾಲೂಕಿನ ಭಾರತೀಯ ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಹರಿದಾಸ್ ಉದ್ಘಾಟಿಸಿ ಪ್ರಥಮ ಚಿಕಿತ್ಸೆಯ ಅವಶ್ಯಕತೆಯ ಬಗ್ಗೆ ವಿವರಿಸಿ ಶುಭಹಾರೈಸಿದರು.

ಬಳಿಕ ಮುಖ್ಯ ತರಬೇತುದಾರರಾಗಿ ಆಗಮಿಸಿದ ದ. ಕ. ಯುವ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಸಚೇತ್ ಸುವರ್ಣ ಅವರಿಂದ ತರಬೇತಿ ನಡೆಯಿತು.


ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ಬೆಳ್ತಂಗಡಿ ತಾಲೂಕಿನ ಭಾರತೀಯ ರೆಡ್ ಕ್ರಾಸ್ ಘಟಕದ ಕಾರ್ಯದರ್ಶಿ ಯಶವಂತ ಪಟವರ್ಧನ್ ವೈ.ಆರ್.ಸಿ ಕಾರ್ಯಕ್ರಮಾಧಿಕಾರಿ ಅವನೀಶ್.ಪಿ, ಉಪಸ್ಥಿತರಿದ್ದರು. ಜೀವನ್ ಸ್ವಾಗತಿಸಿ, ಭೂಮಿಕಾ ವಂದಿಸಿದರು. ಪ್ರಕೃತಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya
error: Content is protected !!