25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಚುನಾವಣೆಯ ಹಿಂದಿನ ದಿನ ಬಿಜೆಪಿಯವರು ಹಣ ಹಂಚುವುದಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮತ್ತಿತರರು ವಾಹನವನ್ನು ಅಡ್ಡಗಟ್ಟಿದ ಘಟನೆ ಮೇ 9 ರಂದು ತಡರಾತ್ರಿ ನಡೆದಿದೆ.
ಬೆಳ್ತಂಗಡಿಯ ಕೆಲ್ಲಗುತ್ತುವಿನಲ್ಲಿ ಕಾಂಗ್ರೆಸ್ಸಿನವರು ವಾಹನವನ್ನು ಅಡ್ಡಗಟ್ಟಿದ ನಂತರ ಚುನಾವಣೆಯ ಫ್ಲೈಯಿಂಗ್ ಸ್ಕ್ಯಾಡ್ ನವರು ಕಾರನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪತ್ತೆಯಾದ 61 ಸಾವಿರ ರೂ ನಗದು ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಕಾರಿನಲ್ಲಿದ್ದ ಬೆಳ್ತಂಗಡಿ ನಗರಸಭಾ ಉಪಾಧ್ಯಕ್ಷ ಜಯಾನಂದ ಗೌಡ ಮತ್ತಿತರರ ಮೇಲೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya
error: Content is protected !!