ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆ
ಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ಶೀಟ್ ಹಾರಿ ಹೋಗಿ ಅಪಾರ ನಷ್ಟ ಉಂಟಾಗಿದೆ.

ಸುಮಾರು ರೂ. 1 ಲಕ್ಷಕ್ಕೂ ಅಧಿಕ ನಷ್ಟ ಆಗಿರುತ್ತದೆ ಎಂದು ಅಂದಾಜಿಸಲಾಗಿದೆ. ಬಡವರಾದ ಇವರಿಗೆ ಸರ್ಕಾರದ ವತಿಯಿಂದ ಸಹಾಯಧನ ಒದಗಿಸಲು ಗ್ರಾಮ ಪಂಚಾಯತಿ ಅಥವಾ ಶಾಸಕರು ಗಮನ ಹರಿಸುವಂತೆ ಕುಟುಂಬಸ್ಥರು ವಿನಂತಿಸಿದ್ದಾರೆ.

Leave a Comment

error: Content is protected !!