July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

PWD ಕ್ವಾಟ್ರಸ್ ಬೆಳ್ತಂಗಡಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಕೋಟು೯ ರಸ್ತೆ
ಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಬೆಳ್ತಂಗಡಿ ವಾಣಿ ಕಾಲೇಜು ಬಳಿಯಲ್ಲಿ ರಸ್ತೆ ಮರ ಬಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.

ಬೆಳ್ತಂಗಡಿ ಪಿಡ್ಲ್ಯೂಡಿಕ್ವಾಟರ್ಸ್ ಬಳಿ ಮರವೊಂದು ಬಿದ್ದು, ಕಂಪೌಂಡ್‌ಗೆ ಹಾನಿಯಾಗಿದೆ. ಕೋರ್ಟು ರಸ್ತೆ ಬದಿ ಮರವೊಂದು ವಿದ್ಯುತ್ ಕಂಬಕ್ಕೆ ಬಿದ್ದು ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.


ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಗಾಳಿಮಳೆಯಿಂದಾಗಿ ಮನೆಗಳಿಗೂ ಹಾನಿ ತಟ್ಟಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿ ವಾಹನ ಸಂಚಾರ ಸುಗಮಗೊಳಿಸಲು ಶ್ರಮಿಸುತ್ತಿದ್ದಾರೆ.

Related posts

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!