September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯನ್ನು ಮಾ.29 ರಂದು ಪ್ರಕಟಿಸಿದ್ದು, ಮೇ 10 ರಂದು ಮತದಾನವು ನಡೆದು ಮತ ಎಣಿಕೆ ಕಾರ್ಯವು ಮೇ 13 ರಂದು ಶನಿವಾರ ಎನ್ ಐ ಟಿ ಕ, ಸುರತ್ಕಲ್, ಮಂಗಳೂರು ಇಲ್ಲಿ ನಡೆಯಲ್ಲಿರುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 5 ರಿಂದ ರಾತ್ರಿ 12 ಗಂಟೆ ತನಕ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ಕಾರ್ಯದ ನಂತರ ವಿಜಯಿಯಾದ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುತ್ತಾ ಮೆರವಣಿಗೆಯಲ್ಲಿ ಸಾಗುವ ಸಾಧ್ಯತೆ ಇರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪುದೇಶಗಳಾಗಿರುವುದರಿಂದ ಸಮಾಜ ಘಾತುಕ ಶಕ್ತಿಗಳು ಶಾಂತಿ ಭಂಗವನ್ನು ಉಂಟುಮಾಡುವ ಸಾಧ್ಯತೆಗಳಿದ್ದು, ವಿಜೇತೆ ಅಭ್ಯರ್ಥಿಗಳು ಹಾಗೂ ಪರಾಜಿತ ಅಭ್ಯರ್ಥಿಗಳ ಬೆಂಬಲಿಗರ ನಡುವೆ ವೈಷಮ್ಯದ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆದು ಕೋಮು ಘರ್ಷಣೆಗಳಾಗಿಪರಿವರ್ತಿತಗೊಳ್ಳುವ ಸಂಭವಗಳಿರುವುದರಿಂದ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತಿ ಅವಶ್ಯವಾಗಿರುತ್ತದೆ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಶಾಂತಿ ಕಾಪಾಡುವ ಸಲುವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರನ್ವಯ ಪದೆತಿಬಂಧಕಾಜ್ಞೆ ವಿಧಿಸಿ ಪರಿಣಾಮಕಾರಿಯಾಗಿ ನಿಯಂತ್ರಿಸುವುದು ಅವಶ್ಯವೆಂದು ಮಂಗಳೂರು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ.

Related posts

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya
error: Content is protected !!