23.7 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿ

ಕುಲಶೇಖರ ಬ್ರಹ್ಮಕಲಶೋತ್ಸವ ಸಂಭ್ರಮ: ಶ್ರೀ ವೀರ ನಾರಾಯಣ ದೇವರಿಗೆ ದಾನಿಗಳಿಂದ ನೂತನ ರಥ ಸಮರ್ಪಣೆ


ಬೆಳ್ತಂಗಡಿ : ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. 10 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಮೇ 14 ರಿಂದ 25 ವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಲಿದ್ದು, ದಾನಿಗಳಿಂದ ನಿನ್ನೆ ಮೇ 12ರಂದು
ಸಂಜೆ ದೇವರಿಗೆ ನೂತನ ರಥ ಸಮರ್ಪಣೆ ಮಾಡಲಾಯಿತು.

ಬರ್ಕೆ ಫ್ರೆಂಡ್ಸ್‌ನ ಗೌರವಾಧ್ಯಕ್ಷರಾದ ಯಜ್ಞೇಶ್ ಬರ್ಕೆ ಹಾಗೂ ಅಧ್ಯಕ್ಷರಾಗಿರುವ ಸುಚೀಂದ್ರ ಅಮೀನ್ ಅವರು ರೂ. 10 ಲಕ್ಷ ವೆಚ್ಚದಲ್ಲಿ ಶ್ರೀ ದೇವರಿಗೆ ಕೊಡುಗೆಯಾಗಿ ನೀಡಿದ ನೂತನ ರಥವನ್ನು ಕ್ಷೇತ್ರದ ಕ್ಷೇತ್ರದ ಸಮಿತಿಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಶ್ರೀ ಕ್ಷೇತ್ರಕ್ಕೆ ಸಮರ್ಪಿಸಿದರು.

ದೇವಸ್ಥಾನದ ಪ್ರಧಾನ ಗೋಪುರ
ರೂ. 25 ಲಕ್ಷ ವೆಚ್ಚದಲ್ಲಿ ದೇವಸ್ಥಾನದ ಮುಖ ಪ್ರಧಾನ ಗೋಪುರದ ವೆಚ್ಚವನ್ನು ಮುಂಬೈ ಉದ್ಯಮಿ ಸುನಿಲ್‌ರಾಜೀವ್ ಸಾಲ್ಯಾನ್ ಮತ್ತು ದೇವಕಿ ಎಸ್. ಸಾಲ್ಯಾನ್ ನೀಡಿದ್ದಾರೆ.

ಮಾರ್ಬಲ್ ಅಳವಡಿಕೆ:
ಸುತ್ತುಪೌಳಿಯ ಒಳಾಂಗಣಕ್ಕೆ ರೂ. 15 ಲಕ್ಷ ವೆಚ್ಚದಲ್ಲಿ ಮಾರ್ಬಲ್ ಅಳವಡಿಸಲಾಗಿದ್ದು, ಇದರ ವೆಚ್ಚವನ್ನು ಬೆಂಗಳೂರಿನ ಅಮೂಲ್ಯ ರಬ್ಬರ್ ಇಂಡಸ್ಟ್ರೀಸ್‌ನ ಮಾಲಕ ಉದ್ಯಮಿ ದಿವಾಕರ ಮೂಲ್ಯ ಅವರು ನೀಡಿದ್ದಾರೆ.

ಬೆಳ್ಳಿ ಕವಚ ಪಲ್ಲಕ್ಕಿ :
ಶ್ರೀ ವೀರನಾರಾಯಣ ದೇವರ ಬೆಳ್ಳಿ ಕವಚದ ಪಲ್ಲಕ್ಕಿಯನ್ನು ರೂ. 10 ಲಕ್ಷ ವೆಚ್ಚದಲ್ಲಿ ಮುಂಬೈ ಉದ್ಯಮಿ ಅಶೋಕ್ ಮೂಲ್ಯ ಥಾಣೆ ಅವರು ಕೊಡುಗೆಯಾಗಿ ನೀಡಿದ್ದಾರೆ. ಅತ್ಯಾಕರ್ಷಕ ಪಲ್ಲಕ್ಕಿಯನ್ನು ಕೋಟೇಶ್ವರದ ಗೋಪಾಲ ಆಚಾರ್ಯ ನಿರ್ಮಿಸಿದ್ದಾರೆ.

Related posts

ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ – ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯ: ಹೈವೇ ಪಟ್ರೊಲ್ ಸಿಬ್ಬಂದಿ ಗಳಿಂದ ರಕ್ಷಣೆ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya
error: Content is protected !!