27.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿ

ಕುಲಶೇಖರ ಬ್ರಹ್ಮಕಲಶೋತ್ಸವ ಸಂಭ್ರಮ: ಶ್ರೀ ವೀರ ನಾರಾಯಣ ದೇವರಿಗೆ ದಾನಿಗಳಿಂದ ನೂತನ ರಥ ಸಮರ್ಪಣೆ


ಬೆಳ್ತಂಗಡಿ : ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. 10 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಮೇ 14 ರಿಂದ 25 ವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಲಿದ್ದು, ದಾನಿಗಳಿಂದ ನಿನ್ನೆ ಮೇ 12ರಂದು
ಸಂಜೆ ದೇವರಿಗೆ ನೂತನ ರಥ ಸಮರ್ಪಣೆ ಮಾಡಲಾಯಿತು.

ಬರ್ಕೆ ಫ್ರೆಂಡ್ಸ್‌ನ ಗೌರವಾಧ್ಯಕ್ಷರಾದ ಯಜ್ಞೇಶ್ ಬರ್ಕೆ ಹಾಗೂ ಅಧ್ಯಕ್ಷರಾಗಿರುವ ಸುಚೀಂದ್ರ ಅಮೀನ್ ಅವರು ರೂ. 10 ಲಕ್ಷ ವೆಚ್ಚದಲ್ಲಿ ಶ್ರೀ ದೇವರಿಗೆ ಕೊಡುಗೆಯಾಗಿ ನೀಡಿದ ನೂತನ ರಥವನ್ನು ಕ್ಷೇತ್ರದ ಕ್ಷೇತ್ರದ ಸಮಿತಿಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಶ್ರೀ ಕ್ಷೇತ್ರಕ್ಕೆ ಸಮರ್ಪಿಸಿದರು.

ದೇವಸ್ಥಾನದ ಪ್ರಧಾನ ಗೋಪುರ
ರೂ. 25 ಲಕ್ಷ ವೆಚ್ಚದಲ್ಲಿ ದೇವಸ್ಥಾನದ ಮುಖ ಪ್ರಧಾನ ಗೋಪುರದ ವೆಚ್ಚವನ್ನು ಮುಂಬೈ ಉದ್ಯಮಿ ಸುನಿಲ್‌ರಾಜೀವ್ ಸಾಲ್ಯಾನ್ ಮತ್ತು ದೇವಕಿ ಎಸ್. ಸಾಲ್ಯಾನ್ ನೀಡಿದ್ದಾರೆ.

ಮಾರ್ಬಲ್ ಅಳವಡಿಕೆ:
ಸುತ್ತುಪೌಳಿಯ ಒಳಾಂಗಣಕ್ಕೆ ರೂ. 15 ಲಕ್ಷ ವೆಚ್ಚದಲ್ಲಿ ಮಾರ್ಬಲ್ ಅಳವಡಿಸಲಾಗಿದ್ದು, ಇದರ ವೆಚ್ಚವನ್ನು ಬೆಂಗಳೂರಿನ ಅಮೂಲ್ಯ ರಬ್ಬರ್ ಇಂಡಸ್ಟ್ರೀಸ್‌ನ ಮಾಲಕ ಉದ್ಯಮಿ ದಿವಾಕರ ಮೂಲ್ಯ ಅವರು ನೀಡಿದ್ದಾರೆ.

ಬೆಳ್ಳಿ ಕವಚ ಪಲ್ಲಕ್ಕಿ :
ಶ್ರೀ ವೀರನಾರಾಯಣ ದೇವರ ಬೆಳ್ಳಿ ಕವಚದ ಪಲ್ಲಕ್ಕಿಯನ್ನು ರೂ. 10 ಲಕ್ಷ ವೆಚ್ಚದಲ್ಲಿ ಮುಂಬೈ ಉದ್ಯಮಿ ಅಶೋಕ್ ಮೂಲ್ಯ ಥಾಣೆ ಅವರು ಕೊಡುಗೆಯಾಗಿ ನೀಡಿದ್ದಾರೆ. ಅತ್ಯಾಕರ್ಷಕ ಪಲ್ಲಕ್ಕಿಯನ್ನು ಕೋಟೇಶ್ವರದ ಗೋಪಾಲ ಆಚಾರ್ಯ ನಿರ್ಮಿಸಿದ್ದಾರೆ.

Related posts

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya
error: Content is protected !!