24.4 C
ಪುತ್ತೂರು, ಬೆಳ್ತಂಗಡಿ
May 19, 2025
ಜಿಲ್ಲಾ ಸುದ್ದಿ

ಕುಲಶೇಖರ ಬ್ರಹ್ಮಕಲಶೋತ್ಸವ ಸಂಭ್ರಮ: ಶ್ರೀ ವೀರ ನಾರಾಯಣ ದೇವರಿಗೆ ದಾನಿಗಳಿಂದ ನೂತನ ರಥ ಸಮರ್ಪಣೆ


ಬೆಳ್ತಂಗಡಿ : ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. 10 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಮೇ 14 ರಿಂದ 25 ವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಲಿದ್ದು, ದಾನಿಗಳಿಂದ ನಿನ್ನೆ ಮೇ 12ರಂದು
ಸಂಜೆ ದೇವರಿಗೆ ನೂತನ ರಥ ಸಮರ್ಪಣೆ ಮಾಡಲಾಯಿತು.

ಬರ್ಕೆ ಫ್ರೆಂಡ್ಸ್‌ನ ಗೌರವಾಧ್ಯಕ್ಷರಾದ ಯಜ್ಞೇಶ್ ಬರ್ಕೆ ಹಾಗೂ ಅಧ್ಯಕ್ಷರಾಗಿರುವ ಸುಚೀಂದ್ರ ಅಮೀನ್ ಅವರು ರೂ. 10 ಲಕ್ಷ ವೆಚ್ಚದಲ್ಲಿ ಶ್ರೀ ದೇವರಿಗೆ ಕೊಡುಗೆಯಾಗಿ ನೀಡಿದ ನೂತನ ರಥವನ್ನು ಕ್ಷೇತ್ರದ ಕ್ಷೇತ್ರದ ಸಮಿತಿಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಶ್ರೀ ಕ್ಷೇತ್ರಕ್ಕೆ ಸಮರ್ಪಿಸಿದರು.

ದೇವಸ್ಥಾನದ ಪ್ರಧಾನ ಗೋಪುರ
ರೂ. 25 ಲಕ್ಷ ವೆಚ್ಚದಲ್ಲಿ ದೇವಸ್ಥಾನದ ಮುಖ ಪ್ರಧಾನ ಗೋಪುರದ ವೆಚ್ಚವನ್ನು ಮುಂಬೈ ಉದ್ಯಮಿ ಸುನಿಲ್‌ರಾಜೀವ್ ಸಾಲ್ಯಾನ್ ಮತ್ತು ದೇವಕಿ ಎಸ್. ಸಾಲ್ಯಾನ್ ನೀಡಿದ್ದಾರೆ.

ಮಾರ್ಬಲ್ ಅಳವಡಿಕೆ:
ಸುತ್ತುಪೌಳಿಯ ಒಳಾಂಗಣಕ್ಕೆ ರೂ. 15 ಲಕ್ಷ ವೆಚ್ಚದಲ್ಲಿ ಮಾರ್ಬಲ್ ಅಳವಡಿಸಲಾಗಿದ್ದು, ಇದರ ವೆಚ್ಚವನ್ನು ಬೆಂಗಳೂರಿನ ಅಮೂಲ್ಯ ರಬ್ಬರ್ ಇಂಡಸ್ಟ್ರೀಸ್‌ನ ಮಾಲಕ ಉದ್ಯಮಿ ದಿವಾಕರ ಮೂಲ್ಯ ಅವರು ನೀಡಿದ್ದಾರೆ.

ಬೆಳ್ಳಿ ಕವಚ ಪಲ್ಲಕ್ಕಿ :
ಶ್ರೀ ವೀರನಾರಾಯಣ ದೇವರ ಬೆಳ್ಳಿ ಕವಚದ ಪಲ್ಲಕ್ಕಿಯನ್ನು ರೂ. 10 ಲಕ್ಷ ವೆಚ್ಚದಲ್ಲಿ ಮುಂಬೈ ಉದ್ಯಮಿ ಅಶೋಕ್ ಮೂಲ್ಯ ಥಾಣೆ ಅವರು ಕೊಡುಗೆಯಾಗಿ ನೀಡಿದ್ದಾರೆ. ಅತ್ಯಾಕರ್ಷಕ ಪಲ್ಲಕ್ಕಿಯನ್ನು ಕೋಟೇಶ್ವರದ ಗೋಪಾಲ ಆಚಾರ್ಯ ನಿರ್ಮಿಸಿದ್ದಾರೆ.

Related posts

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya
error: Content is protected !!