22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಮೇ 13 ನಾಳೆ ಮಂಗಳೂರು, ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ನಡೆಯಲಿದೆ. ಮೇ 10ರಂದು ತಾಲೂಕಿನ 241 ಮತದಾನ ಕೇಂದ್ರಗಳಲ್ಲಿ ಚುನಾವಣೆ ನಡೆದ ಬಳಿಕ ಮಂಗಳೂರಿಲ್ಲಿ ರೂಮಿನಲ್ಲಿ ಇವಿಎಂ, ವಿವಿ ಪ್ಯಾಟ್‌ಗಳನ್ನು ಇಡಲಾಗಿದ್ದು, ಕೇಂದ್ರೀಯ ಅರೆಸೇನಾ ಪಡೆ ಭದ್ರತೆ ಒದಗಿಸಿದೆ.


ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಶೇ 82.65 ಮತದಾನವಾಗಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ 1,13,774 ಪುರುಷರು ಹಾಗೂ 1,15,096 ಮಹಿಳೆಯರು ಸೇರಿದಂತೆ ಒಟ್ಟು 2,28,871 ಮತದಾರರಿದ್ದು, ಇವರಲ್ಲಿ ಮೇ 10ರಂದು ನಡೆದ ಚುನಾವಣೆಯಲ್ಲಿ 92,751 ಪುರುಷರು ಮತ್ತು 93,755 ಮಂದಿ ಸೇರಿದಂತೆ ಒಟ್ಟು 1,86,506 ಮತಚಲಾಯಿಸಿದ್ದಾರೆ. ಶೇ 81.49 ಮತದಾನವಾಗಿದೆ. ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಾಂಗರಿಗೆ ಮನೆಯಿಂದಲೇ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ 2654 ಮಂದಿ ಮತ ಚಲಾಯಿಸಿದ್ದಾರೆ. ಇದರಿಂದಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಒಟ್ಟು ಮತದಾನ ಶೇ 82.65 ಆದಂತಾಗಿದೆ.


ಸುರತ್ಕಲ್ ಎನ್‌ಐಟಿಕೆಯಲ್ಲಿ ಮತ ಎಣಿಕೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ನಾಳೆ ಶನಿವಾರ ಬೆಳಗ್ಗೆ 8 ರಿಂದ ಆರಂಭವಾಗಲಿದೆ. ಅಂಚೆ ಮತಪತ್ರಗಳ ಎಣಿಕೆ ಪ್ರಾರಂಭವಾದ 30 ನಿಮಿಷಗಳ ಬಳಿಕ ಮತ ಗಟ್ಟೆಗಳಲ್ಲಿ ಇವಿಎಂನಲ್ಲಿ ದಾಖಲಾದ ಮತಗಳ ಎಣಿಕೆ ನಡೆಸಲು ಗೊತ್ತು ಪಡಿಸಲಾದ ಮೇಜುಗಳಲ್ಲಿ ನಡೆಯಲಿದೆ. ಮತಗಳ ಎಣಿಕೆ ನಡೆಸುವ ಬಗ್ಗೆ ಅಭ್ಯರ್ಥಿಗಳು ನಿಗದಿಪಡಿಸಿದ ನಮೂನೆ 18ರಲ್ಲಿ 14 ಮತ ಎಣಿಕೆ ಮೇಜಿಗೆ, 5 ಅಂಚೆ ಪತ್ರಗಳ ಎಣಿಕೆ ಮೇಜಿಗೆ ಮತ್ತು 1 ಚುನಾವಣಾಧಿಕಾರಿ ಮೇಜಿಗೆ ಒಟ್ಟು 20 ಮತ ಎಣಿಕೆ ಏಜೆಂಟರನ್ನು ನೇಮಿಸಿಕೊಳ್ಳಲು ಅವಕಾಶ ನೀಡಲಾಗಿದೆ.


ಪ್ರತಿ ವಿಧಾನ ಸಭಾ ಕ್ಷೇತ್ರಗಳಿಗೂ ಪ್ರತ್ಯೇಕ ಕೊಠಡಿಯಲ್ಲಿ ಮತ ಎಣಿಕೆ ನಡೆಸಲಾಗುತ್ತಿದ್ದು, ಇದಕ್ಕೆ ಬೇಕಾದ ಎಣಿಕೆ ಮೇಜುಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಸುತ್ತಿನ ಎಣಿಕೆ ಪೂರ್ಣಗೊಂಡ ನಂತರ ಇದರ ದಾಖಲೀಕರಣ ನಡೆಯಲಿದೆ. ಬಹುತೇಕ 15 ಸುತ್ತುಗಳು ಪೂರ್ಣಗೊಳ್ಳುವ ಹಂತದಲ್ಲಿ ಯಾರು ವಿಜೇತರು ಎಂದು ಸ್ವಷ್ಟಗೊಳ್ಳಲಿದ್ದು, ಎಣಿಕೆ ಪೂರ್ಣಗೊಂಡ ಬಳಿಕ ಚುನಾವಣಾಧಿಕಾರಿಗಳು ಚುನಾವಣಾ ಆಯೋಗದ ಅನುಮತಿಯನ್ನು ಪಡೆದು ಅಂತಿಮ ಫಲಿತಾಂಶವನ್ನು ಘೋಷಣೆ ಮಾಡಲಿದ್ದಾರೆ.

Related posts

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya
error: Content is protected !!