24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

ಉಜಿರೆ: ಬೇಸಿಗೆಯ ಬಿಸಿಲ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಈ ದಿನಗಳಲ್ಲಿ ಪ್ರಕೃತಿಯ ಸೂಕ್ಷ್ಮ ಜೀವ ಪ್ರಭೇದಗಳಾದ ಪಕ್ಷಿಗಳು ನೀರು ಮತ್ತು ಆಹಾರದ ಕೊರತೆಯಿಂದಾಗಿ ಬವಣೆ ಅನುಭವಿಸುವಂಥಾಗಿದೆ.
ನದಿ, ಕೆರೆ, ಜಲಮೂಲಗಳು ಬತ್ತಿ ಹೋಗುತ್ತಿರುವ ಈ ಸಂದರ್ಭದಲ್ಲಿ ಜನರೇ ಪರದಾಡುತ್ತಿರುವಾಗ ಬಾನಾಡಿಗಳು ಆಹಾರ ಮತ್ತು ನೀರಿನ ಕೊರತೆಯಿಂದ ತೀರ ಸಂಕಷ್ಟವನ್ನು ಎದುರಿಸುವ ಹಾಗಾಗಿದೆ.
ಪಕ್ಷಿಗಳ ಈ ಬವಣೆಯನ್ನು ನೀಗಲು ಉಜಿರೆಯ ಎಸ್ ಡಿ ಎಮ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಬಾನಾಡಿಗಳ ಬಾಯಾರಿಕೆ ಇಂಗಿಸುವ ಒಂದು ವಿಶೇಷ ಯೋಜನೆಯನ್ನ ರೂಪಿಸಲಾಗಿದ್ದು ಆ ಪ್ರಕಾರ ಕಾಲೇಜಿನ ಆವರಣದಲ್ಲಿರುವ ಮರಗಳಲ್ಲಿ ಹಾಗೂ ವಿದ್ಯಾರ್ಥಿಗಳ ಮನೆಗಳಲ್ಲಿ ಬರ್ಡ ಫೀಡರ್ ಗಳನ್ನು ಅಳವಡಿಸಿ ಅದರಲ್ಲಿ ನೀರು ಮತ್ತು ಧಾನ್ಯವನ್ನ ಹಾಕಿ ಹಕ್ಕಿಗಳಿಗೆ ತಮ್ಮ ಕೈಲಾದ ಸಹಾಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಬರ್ಡ್ ಫೀಡರ್ಗಳಿಗೆ ನೀರನ್ನು ತುಂಬಿ ಆಹಾರದ ಕಾಳುಗಳನ್ನ ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಏ ಕುಮಾರ ಹೆಗ್ಡೆ ಅವರು ಈ ಯೋಜನೆಯನ್ನು ಉದ್ಘಾಟಿಸಿ ಪ್ರಕೃತಿ , ಪರಿಸರ, ಪಕ್ಷಿಗಳು ಮತ್ತು ಮನುಷ್ಯರ ನಡುವೆ ಇರುವ ಸಂಬಂಧವನ್ನು ಅವರು ವಿದ್ಯಾರ್ಥಿಗಳಿಗೆ ವಿವರಿಸಿ ಹೇಳಿದರು.
ಸಸ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya
error: Content is protected !!