30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

ಉಜಿರೆ: ಬೇಸಿಗೆಯ ಬಿಸಿಲ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಈ ದಿನಗಳಲ್ಲಿ ಪ್ರಕೃತಿಯ ಸೂಕ್ಷ್ಮ ಜೀವ ಪ್ರಭೇದಗಳಾದ ಪಕ್ಷಿಗಳು ನೀರು ಮತ್ತು ಆಹಾರದ ಕೊರತೆಯಿಂದಾಗಿ ಬವಣೆ ಅನುಭವಿಸುವಂಥಾಗಿದೆ.
ನದಿ, ಕೆರೆ, ಜಲಮೂಲಗಳು ಬತ್ತಿ ಹೋಗುತ್ತಿರುವ ಈ ಸಂದರ್ಭದಲ್ಲಿ ಜನರೇ ಪರದಾಡುತ್ತಿರುವಾಗ ಬಾನಾಡಿಗಳು ಆಹಾರ ಮತ್ತು ನೀರಿನ ಕೊರತೆಯಿಂದ ತೀರ ಸಂಕಷ್ಟವನ್ನು ಎದುರಿಸುವ ಹಾಗಾಗಿದೆ.
ಪಕ್ಷಿಗಳ ಈ ಬವಣೆಯನ್ನು ನೀಗಲು ಉಜಿರೆಯ ಎಸ್ ಡಿ ಎಮ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಬಾನಾಡಿಗಳ ಬಾಯಾರಿಕೆ ಇಂಗಿಸುವ ಒಂದು ವಿಶೇಷ ಯೋಜನೆಯನ್ನ ರೂಪಿಸಲಾಗಿದ್ದು ಆ ಪ್ರಕಾರ ಕಾಲೇಜಿನ ಆವರಣದಲ್ಲಿರುವ ಮರಗಳಲ್ಲಿ ಹಾಗೂ ವಿದ್ಯಾರ್ಥಿಗಳ ಮನೆಗಳಲ್ಲಿ ಬರ್ಡ ಫೀಡರ್ ಗಳನ್ನು ಅಳವಡಿಸಿ ಅದರಲ್ಲಿ ನೀರು ಮತ್ತು ಧಾನ್ಯವನ್ನ ಹಾಕಿ ಹಕ್ಕಿಗಳಿಗೆ ತಮ್ಮ ಕೈಲಾದ ಸಹಾಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಬರ್ಡ್ ಫೀಡರ್ಗಳಿಗೆ ನೀರನ್ನು ತುಂಬಿ ಆಹಾರದ ಕಾಳುಗಳನ್ನ ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಏ ಕುಮಾರ ಹೆಗ್ಡೆ ಅವರು ಈ ಯೋಜನೆಯನ್ನು ಉದ್ಘಾಟಿಸಿ ಪ್ರಕೃತಿ , ಪರಿಸರ, ಪಕ್ಷಿಗಳು ಮತ್ತು ಮನುಷ್ಯರ ನಡುವೆ ಇರುವ ಸಂಬಂಧವನ್ನು ಅವರು ವಿದ್ಯಾರ್ಥಿಗಳಿಗೆ ವಿವರಿಸಿ ಹೇಳಿದರು.
ಸಸ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!