32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

ಉಜಿರೆ: ಬೇಸಿಗೆಯ ಬಿಸಿಲ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಈ ದಿನಗಳಲ್ಲಿ ಪ್ರಕೃತಿಯ ಸೂಕ್ಷ್ಮ ಜೀವ ಪ್ರಭೇದಗಳಾದ ಪಕ್ಷಿಗಳು ನೀರು ಮತ್ತು ಆಹಾರದ ಕೊರತೆಯಿಂದಾಗಿ ಬವಣೆ ಅನುಭವಿಸುವಂಥಾಗಿದೆ.
ನದಿ, ಕೆರೆ, ಜಲಮೂಲಗಳು ಬತ್ತಿ ಹೋಗುತ್ತಿರುವ ಈ ಸಂದರ್ಭದಲ್ಲಿ ಜನರೇ ಪರದಾಡುತ್ತಿರುವಾಗ ಬಾನಾಡಿಗಳು ಆಹಾರ ಮತ್ತು ನೀರಿನ ಕೊರತೆಯಿಂದ ತೀರ ಸಂಕಷ್ಟವನ್ನು ಎದುರಿಸುವ ಹಾಗಾಗಿದೆ.
ಪಕ್ಷಿಗಳ ಈ ಬವಣೆಯನ್ನು ನೀಗಲು ಉಜಿರೆಯ ಎಸ್ ಡಿ ಎಮ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಬಾನಾಡಿಗಳ ಬಾಯಾರಿಕೆ ಇಂಗಿಸುವ ಒಂದು ವಿಶೇಷ ಯೋಜನೆಯನ್ನ ರೂಪಿಸಲಾಗಿದ್ದು ಆ ಪ್ರಕಾರ ಕಾಲೇಜಿನ ಆವರಣದಲ್ಲಿರುವ ಮರಗಳಲ್ಲಿ ಹಾಗೂ ವಿದ್ಯಾರ್ಥಿಗಳ ಮನೆಗಳಲ್ಲಿ ಬರ್ಡ ಫೀಡರ್ ಗಳನ್ನು ಅಳವಡಿಸಿ ಅದರಲ್ಲಿ ನೀರು ಮತ್ತು ಧಾನ್ಯವನ್ನ ಹಾಕಿ ಹಕ್ಕಿಗಳಿಗೆ ತಮ್ಮ ಕೈಲಾದ ಸಹಾಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಬರ್ಡ್ ಫೀಡರ್ಗಳಿಗೆ ನೀರನ್ನು ತುಂಬಿ ಆಹಾರದ ಕಾಳುಗಳನ್ನ ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಏ ಕುಮಾರ ಹೆಗ್ಡೆ ಅವರು ಈ ಯೋಜನೆಯನ್ನು ಉದ್ಘಾಟಿಸಿ ಪ್ರಕೃತಿ , ಪರಿಸರ, ಪಕ್ಷಿಗಳು ಮತ್ತು ಮನುಷ್ಯರ ನಡುವೆ ಇರುವ ಸಂಬಂಧವನ್ನು ಅವರು ವಿದ್ಯಾರ್ಥಿಗಳಿಗೆ ವಿವರಿಸಿ ಹೇಳಿದರು.
ಸಸ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya
error: Content is protected !!