23.3 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿ

ಕುಲಶೇಖರ ಬ್ರಹ್ಮಕಲಶೋತ್ಸವ ಸಂಭ್ರಮ: ಶ್ರೀ ವೀರ ನಾರಾಯಣ ದೇವರಿಗೆ ದಾನಿಗಳಿಂದ ನೂತನ ರಥ ಸಮರ್ಪಣೆ


ಬೆಳ್ತಂಗಡಿ : ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. 10 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಮೇ 14 ರಿಂದ 25 ವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಲಿದ್ದು, ದಾನಿಗಳಿಂದ ನಿನ್ನೆ ಮೇ 12ರಂದು
ಸಂಜೆ ದೇವರಿಗೆ ನೂತನ ರಥ ಸಮರ್ಪಣೆ ಮಾಡಲಾಯಿತು.

ಬರ್ಕೆ ಫ್ರೆಂಡ್ಸ್‌ನ ಗೌರವಾಧ್ಯಕ್ಷರಾದ ಯಜ್ಞೇಶ್ ಬರ್ಕೆ ಹಾಗೂ ಅಧ್ಯಕ್ಷರಾಗಿರುವ ಸುಚೀಂದ್ರ ಅಮೀನ್ ಅವರು ರೂ. 10 ಲಕ್ಷ ವೆಚ್ಚದಲ್ಲಿ ಶ್ರೀ ದೇವರಿಗೆ ಕೊಡುಗೆಯಾಗಿ ನೀಡಿದ ನೂತನ ರಥವನ್ನು ಕ್ಷೇತ್ರದ ಕ್ಷೇತ್ರದ ಸಮಿತಿಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಶ್ರೀ ಕ್ಷೇತ್ರಕ್ಕೆ ಸಮರ್ಪಿಸಿದರು.

ದೇವಸ್ಥಾನದ ಪ್ರಧಾನ ಗೋಪುರ
ರೂ. 25 ಲಕ್ಷ ವೆಚ್ಚದಲ್ಲಿ ದೇವಸ್ಥಾನದ ಮುಖ ಪ್ರಧಾನ ಗೋಪುರದ ವೆಚ್ಚವನ್ನು ಮುಂಬೈ ಉದ್ಯಮಿ ಸುನಿಲ್‌ರಾಜೀವ್ ಸಾಲ್ಯಾನ್ ಮತ್ತು ದೇವಕಿ ಎಸ್. ಸಾಲ್ಯಾನ್ ನೀಡಿದ್ದಾರೆ.

ಮಾರ್ಬಲ್ ಅಳವಡಿಕೆ:
ಸುತ್ತುಪೌಳಿಯ ಒಳಾಂಗಣಕ್ಕೆ ರೂ. 15 ಲಕ್ಷ ವೆಚ್ಚದಲ್ಲಿ ಮಾರ್ಬಲ್ ಅಳವಡಿಸಲಾಗಿದ್ದು, ಇದರ ವೆಚ್ಚವನ್ನು ಬೆಂಗಳೂರಿನ ಅಮೂಲ್ಯ ರಬ್ಬರ್ ಇಂಡಸ್ಟ್ರೀಸ್‌ನ ಮಾಲಕ ಉದ್ಯಮಿ ದಿವಾಕರ ಮೂಲ್ಯ ಅವರು ನೀಡಿದ್ದಾರೆ.

ಬೆಳ್ಳಿ ಕವಚ ಪಲ್ಲಕ್ಕಿ :
ಶ್ರೀ ವೀರನಾರಾಯಣ ದೇವರ ಬೆಳ್ಳಿ ಕವಚದ ಪಲ್ಲಕ್ಕಿಯನ್ನು ರೂ. 10 ಲಕ್ಷ ವೆಚ್ಚದಲ್ಲಿ ಮುಂಬೈ ಉದ್ಯಮಿ ಅಶೋಕ್ ಮೂಲ್ಯ ಥಾಣೆ ಅವರು ಕೊಡುಗೆಯಾಗಿ ನೀಡಿದ್ದಾರೆ. ಅತ್ಯಾಕರ್ಷಕ ಪಲ್ಲಕ್ಕಿಯನ್ನು ಕೋಟೇಶ್ವರದ ಗೋಪಾಲ ಆಚಾರ್ಯ ನಿರ್ಮಿಸಿದ್ದಾರೆ.

Related posts

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya
error: Content is protected !!