July 23, 2026
ಜಿಲ್ಲಾ ಸುದ್ದಿ

ಕುಲಶೇಖರ ಬ್ರಹ್ಮಕಲಶೋತ್ಸವ ಸಂಭ್ರಮ: ಶ್ರೀ ವೀರ ನಾರಾಯಣ ದೇವರಿಗೆ ದಾನಿಗಳಿಂದ ನೂತನ ರಥ ಸಮರ್ಪಣೆ


ಬೆಳ್ತಂಗಡಿ : ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. 10 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಮೇ 14 ರಿಂದ 25 ವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಬಹಳ ವಿಜೃಂಭಣೆಯಿಂದ ಜರಗಲಿದ್ದು, ದಾನಿಗಳಿಂದ ನಿನ್ನೆ ಮೇ 12ರಂದು
ಸಂಜೆ ದೇವರಿಗೆ ನೂತನ ರಥ ಸಮರ್ಪಣೆ ಮಾಡಲಾಯಿತು.

ಬರ್ಕೆ ಫ್ರೆಂಡ್ಸ್‌ನ ಗೌರವಾಧ್ಯಕ್ಷರಾದ ಯಜ್ಞೇಶ್ ಬರ್ಕೆ ಹಾಗೂ ಅಧ್ಯಕ್ಷರಾಗಿರುವ ಸುಚೀಂದ್ರ ಅಮೀನ್ ಅವರು ರೂ. 10 ಲಕ್ಷ ವೆಚ್ಚದಲ್ಲಿ ಶ್ರೀ ದೇವರಿಗೆ ಕೊಡುಗೆಯಾಗಿ ನೀಡಿದ ನೂತನ ರಥವನ್ನು ಕ್ಷೇತ್ರದ ಕ್ಷೇತ್ರದ ಸಮಿತಿಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಶ್ರೀ ಕ್ಷೇತ್ರಕ್ಕೆ ಸಮರ್ಪಿಸಿದರು.

ದೇವಸ್ಥಾನದ ಪ್ರಧಾನ ಗೋಪುರ
ರೂ. 25 ಲಕ್ಷ ವೆಚ್ಚದಲ್ಲಿ ದೇವಸ್ಥಾನದ ಮುಖ ಪ್ರಧಾನ ಗೋಪುರದ ವೆಚ್ಚವನ್ನು ಮುಂಬೈ ಉದ್ಯಮಿ ಸುನಿಲ್‌ರಾಜೀವ್ ಸಾಲ್ಯಾನ್ ಮತ್ತು ದೇವಕಿ ಎಸ್. ಸಾಲ್ಯಾನ್ ನೀಡಿದ್ದಾರೆ.

ಮಾರ್ಬಲ್ ಅಳವಡಿಕೆ:
ಸುತ್ತುಪೌಳಿಯ ಒಳಾಂಗಣಕ್ಕೆ ರೂ. 15 ಲಕ್ಷ ವೆಚ್ಚದಲ್ಲಿ ಮಾರ್ಬಲ್ ಅಳವಡಿಸಲಾಗಿದ್ದು, ಇದರ ವೆಚ್ಚವನ್ನು ಬೆಂಗಳೂರಿನ ಅಮೂಲ್ಯ ರಬ್ಬರ್ ಇಂಡಸ್ಟ್ರೀಸ್‌ನ ಮಾಲಕ ಉದ್ಯಮಿ ದಿವಾಕರ ಮೂಲ್ಯ ಅವರು ನೀಡಿದ್ದಾರೆ.

ಬೆಳ್ಳಿ ಕವಚ ಪಲ್ಲಕ್ಕಿ :
ಶ್ರೀ ವೀರನಾರಾಯಣ ದೇವರ ಬೆಳ್ಳಿ ಕವಚದ ಪಲ್ಲಕ್ಕಿಯನ್ನು ರೂ. 10 ಲಕ್ಷ ವೆಚ್ಚದಲ್ಲಿ ಮುಂಬೈ ಉದ್ಯಮಿ ಅಶೋಕ್ ಮೂಲ್ಯ ಥಾಣೆ ಅವರು ಕೊಡುಗೆಯಾಗಿ ನೀಡಿದ್ದಾರೆ. ಅತ್ಯಾಕರ್ಷಕ ಪಲ್ಲಕ್ಕಿಯನ್ನು ಕೋಟೇಶ್ವರದ ಗೋಪಾಲ ಆಚಾರ್ಯ ನಿರ್ಮಿಸಿದ್ದಾರೆ.

Related posts

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ

Suddi Udaya
error: Content is protected !!