July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

ಬೆಳ್ತಂಗಡಿ: ಮತ ಚಲಾವಣೆ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು ಒಂದು ಹಂತದ ನಿಟ್ಟುಸಿರು ಬಿಟ್ಟಿರಬಹುದು. ಆದರೆ, ವಾಸ್ತವವಾಗಿ ಈಗಿನಿಂದಲೇ ಅವರ ಹೃದಯಬಡಿತ ಹೆಚ್ಚಾಗಿದೆ. ಕಾರಣ ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಲಿರುವುದು.

ಮತ ಎಣಿಕೆ ನಡೆಯುವ ಶನಿವಾರದವರೆಗೂ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರ ನಡುವೆ ನಡೆಯುತ್ತಿದೆ. ಸೋಲು- ಗೆಲುವಿನ ಲೆಕ್ಕಾಚಾರ.
ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ಅಂತ್ಯಗೊಂಡು ಮತಪೆಟ್ಟಿಗೆ ಸ್ಟ್ರಾಂಗ್ ರೂಮಿಗೆ ತಲುಪುತ್ತಿದ್ದಂತೆ ಇತ್ತ ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ಸೋಲು-ಗೆಲುವಿನ ಲೆಕ್ಕಾಚಾರದ ನಡುವೆ ಬೆಟ್ಟಿಂಗ್ ಭರಾಟೆ ಜೋರಾಗಿ ಆರಂಭಗೊಂಡಿದೆ. ಈಗ ಬೂತ್‌ಮಟ್ಟದಲ್ಲಿ ನಡೆದಿರುವ ಶೇಕಡವಾರು ಮತ ಚಲಾವಣೆಯ ಲೆಕ್ಕವಿಟ್ಟುಕೊಂಡು ತಾಳೆ ಹಾಕುವ ಕೆಲಸದಲ್ಲಿ ಮಗ್ನರಾಗಿದ್ದಾರೆ. ಇಡೀ ದಿನ ಕ್ಷೇತ್ರದ ಮತಗಟ್ಟೆಗಳಲ್ಲಿ ಕಾಣಿಸಿಕೊಂಡ ಮತದಾರರನ್ನೇ ನೋಡಿ ಲೆಕ್ಕ ಹಾಕುವ ಕಾರ್ಯವೂ ಒಂದೆಡೆ ನಡೆದಿದೆ. ಯಾರಿಗೆ ಎಷ್ಟು ಮತ, ಯಾವ ಬೂತಿನಲ್ಲಿ ಯಾವ ಪಕ್ಷದ ಅಭ್ಯರ್ಥಿಗೆ ಹೆಚ್ಚು ಮತ ಬಿದ್ದಿರಬಹುದೆಂದು ಅಲೆದು ತೂಗಿ ಇದರ ಆಧಾರದಲ್ಲಿ ಬೆಟ್ಟಿಂಗ್ ಗ್ರಾಮ ಗ್ರಾಮದಲ್ಲಿ ನಡೆಯುತ್ತದೆ
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು, ಯಾರು ಸೋಲಬಹುದು ಎಂಬ ಲೆಕ್ಕಚಾರಗಳು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರಲ್ಲಿ ನಡೆಯುತ್ತಿದ್ದು, ಅವರು ಪಡೆಯಲಿರುವ ಮತಗಳ ಲೆಕ್ಕಾಚಾರದಲ್ಲಿ ದುಬಾರಿ ಬೆಲೆಯ ಬೆಟ್ಟಿಂಗ್ ನಡೆಯುತ್ತಿದೆ. ಹೆಚ್ಚಿನ ಕಡೆಗಳಲ್ಲಿ ನಗದು ರೂಪದಲ್ಲೇ ಹೆಚ್ಚಿನ ಬೆಟ್ಟಿಂಗ್ ನಡೆಯುತ್ತಿದೆ. ಜೊತೆಗೆ ಯಾವ ಅಭ್ಯರ್ಥಿ ಗೆಲ್ಲಬಹುದು ಮತ್ತು ಯಾವ ಪಕ್ಷದ ಅಭ್ಯರ್ಥಿ ಸೋಲಬಹುದು ಎಂಬ ಲೆಕ್ಕದಲ್ಲಿ ಬೆಟ್ಟಿಂಗ್ ನಡೆದರೆ ಇನ್ನೊಂದು ಕಡೆಯಿಂದ ಅಭ್ಯರ್ಥಿ ಎಷ್ಟು ಮತಗಳ ಅಂತರದಲ್ಲಿ ಗೆಲ್ಲಬಹುದು ಎಂಬ ಬಗ್ಗೆ ಬೆಟ್ಟಿಂಗ್ ನಡೆಯುತ್ತಿದೆ.
ಇತರ ಅಭ್ಯರ್ಥಿಗಳ ಮೇಲೂ ಬೆಟ್ಟಿಂಗ್:
ತಾಲೂಕಿನಲ್ಲಿ ಇತರ ಪಕ್ಷಗಳ ಅಭ್ಯರ್ಥಿಗಳ ಮೇಲೂ ಬೆಟ್ಟಿಂಗ್ ನಡೆಯುತ್ತಿದೆ. ಜೆಡಿಎಸ್, ಎಸ್‌ಡಿಪಿಐ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತ ಪಡೆಯಬಹುದು ಎಂಬುದರ ಮೇಲೆ ಕೂಡಾ ಬೆಟ್ಟಿಂಗ್ ನಡೆಯುತ್ತಿದೆ. ತಾಲೂಕಿನಾದ್ಯಂತ ಅಭ್ಯರ್ಥಿಗಳ ಸೋಲು-ಗೆಲುವಿನ ಚರ್ಚೆಯ ನಡುವೆ ಬೆಟ್ಟಿಂಗ್ ವಿಷಯವು ಜೋರಾಗಿದೆ. ಆದರೆ ಮೌನವಾಗಿ ಮತ ಚಲಾಯಿಸಿದ ಮತದಾರ ಮಾತ್ರ ಎಂದಿನಂತೆ ತನ್ನ ಕಾಯಕದಲ್ಲಿ ತೊಡಗಿಕೊಂಡಿದ್ದಾನೆ.

Related posts

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!