ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.

ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗೇಶ್ ಎಚ್.ಟಿ. ಮತ್ತು ಉಪಚುನಾವಣಾಧಿಕಾರಿ ಸುರೇಶ್ ಕುಮಾರ್ ಸಮ್ಮುಖದಲ್ಲಿ ಬೆಳ್ತಂಗಡಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸಾವಿರಾರು ಮಂದಿ ಮಂಗಳೂರಿಗೆ ತೆರಳಿದ್ದಾರೆ.

ಐದನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. 4971 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 30183 ಮತಗಳು
  • ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 25212 ಮತಗಳು
  • ಹರೀಶ್ ಪೂಂಜಾ 4971 ಮತಗಳ ಮುನ್ನಡೆ

Leave a Comment

error: Content is protected !!