23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ.

ಘಟನೆ ವಿವರ: ಮಹಿಳೆ ಹಾಗೂ ಆಕೆಯ ಪತಿಗೆ ಆರೋಪಿ ಉಜಿರೆಯ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ರವರು ಅವರ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿ, ಅವರ ಮನೆಯಲ್ಲಿಯೇ ಆಶ್ರಯ ನೀಡಿ ಇಂದು ಬೆಳಿಗ್ಗೆ 8-30 ಗಂಟೆಗೆ ಮಹಿಳೆಯನ್ನು ಆರೋಪಿಯು ಧರ್ಮಸ್ಥಳ ದಲ್ಲಿರುವ ಅವರ ಸಂಸ್ಥೆಗೆ ಕೆಲಸಕ್ಕೆ ಬಿಡುವುದಾಗಿ ತಿಳಿಸಿ ರೆಂಜಾಳ ಎಂಬಲ್ಲಿನ ತನ್ನ ಮನೆಯಿಂದ ಮಹಿಳೆಯನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಕಾರು ಚಲಾಯಿಸುತ್ತಾ ಧರ್ಮಸ್ಥಳ ಮಾರ್ಗವಾಗಿ ಚಲಿಸದೇ ಕಿಡ್ನಾಪ್‌ ಮಾಡಿ ಕಕ್ಕಿಂಜೆ ಮಾರ್ಗವಾಗಿ ಕಾರನ್ನು ಚಲಾಯಿಸಿಕೊಂಡು ಹೋದಾಗ ಮಹಿಳೆಗೆ ಸಂಶಯ ಬಂದು ಈ ಬಗ್ಗೆ ಪ್ರಶ್ನಿಸಿದಾಗ ನಿನ್ನ ಗಂಡನಿಗೆ ಹೇಗೂ ಕೆಲಸ ಕೊಟ್ಟಿದ್ದಿನಲ್ಲಾ ಎಂದು ಹೇಳುತ್ತಾ ಲೈಂಗಿಕ ದೌರ್ಜನ್ಯ ಮತ್ತು ಅವಮಾನಕರವಾಗಿ ವರ್ತಿಸಿದಾಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದು ಕೆಲವರು ಅಲ್ಲಿಗೆ ಬರುವುದನ್ನು ಕಂಡು ಸ್ವಲ್ಪ ಮುಂದೆ ಹೋಗಿ ಕಾರಿನಿಂದ ಇಳಿಸಿ ಆರೋಪಿಯು ಹೊರಟು ಹೋಗಿರುತ್ತಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರ ತನಿಖೆಯ ನಂತರವೇ ತಿಳಿದುಬರಬೇಕಿದೆ.

Related posts

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!