September 6, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ.

ಘಟನೆ ವಿವರ: ಮಹಿಳೆ ಹಾಗೂ ಆಕೆಯ ಪತಿಗೆ ಆರೋಪಿ ಉಜಿರೆಯ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ರವರು ಅವರ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿ, ಅವರ ಮನೆಯಲ್ಲಿಯೇ ಆಶ್ರಯ ನೀಡಿ ಇಂದು ಬೆಳಿಗ್ಗೆ 8-30 ಗಂಟೆಗೆ ಮಹಿಳೆಯನ್ನು ಆರೋಪಿಯು ಧರ್ಮಸ್ಥಳ ದಲ್ಲಿರುವ ಅವರ ಸಂಸ್ಥೆಗೆ ಕೆಲಸಕ್ಕೆ ಬಿಡುವುದಾಗಿ ತಿಳಿಸಿ ರೆಂಜಾಳ ಎಂಬಲ್ಲಿನ ತನ್ನ ಮನೆಯಿಂದ ಮಹಿಳೆಯನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಕಾರು ಚಲಾಯಿಸುತ್ತಾ ಧರ್ಮಸ್ಥಳ ಮಾರ್ಗವಾಗಿ ಚಲಿಸದೇ ಕಿಡ್ನಾಪ್‌ ಮಾಡಿ ಕಕ್ಕಿಂಜೆ ಮಾರ್ಗವಾಗಿ ಕಾರನ್ನು ಚಲಾಯಿಸಿಕೊಂಡು ಹೋದಾಗ ಮಹಿಳೆಗೆ ಸಂಶಯ ಬಂದು ಈ ಬಗ್ಗೆ ಪ್ರಶ್ನಿಸಿದಾಗ ನಿನ್ನ ಗಂಡನಿಗೆ ಹೇಗೂ ಕೆಲಸ ಕೊಟ್ಟಿದ್ದಿನಲ್ಲಾ ಎಂದು ಹೇಳುತ್ತಾ ಲೈಂಗಿಕ ದೌರ್ಜನ್ಯ ಮತ್ತು ಅವಮಾನಕರವಾಗಿ ವರ್ತಿಸಿದಾಗ ಮಹಿಳೆ ಜೋರಾಗಿ ಬೊಬ್ಬೆ ಹೊಡೆದು ಕೆಲವರು ಅಲ್ಲಿಗೆ ಬರುವುದನ್ನು ಕಂಡು ಸ್ವಲ್ಪ ಮುಂದೆ ಹೋಗಿ ಕಾರಿನಿಂದ ಇಳಿಸಿ ಆರೋಪಿಯು ಹೊರಟು ಹೋಗಿರುತ್ತಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರ ತನಿಖೆಯ ನಂತರವೇ ತಿಳಿದುಬರಬೇಕಿದೆ.

Related posts

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya
error: Content is protected !!